ಮುಖ್ಯಮಂತ್ರಿ ಕಚೇರಿಯಿಂದ ಆಯ್ದ ಪತ್ರಕರ್ತರಿಗೆ ತಲಾ 2.5 ಲಕ್ಷ ರೂ ಗಿಫ್ಟ್ ರೂಪದ ಲಂಚದ ಆರೋಪ..

Spread the love

ಮುಖ್ಯಮಂತ್ರಿ ಕಚೇರಿಯಿಂದ ಆಯ್ದ ಪತ್ರಕರ್ತರಿಗೆ ತಲಾ 2.5 ಲಕ್ಷ ರೂ ಗಿಫ್ಟ್ ರೂಪದ ಲಂಚದ ಆರೋಪ…

ಕೆಲ ಪತ್ರಕರ್ತರು ಸಿಹಿ ತಿಂಡಿಯ ಪೊಟ್ಟಣದ ಜೊತೆ ನೋಟಿನ ಕಂತೆ ನೋಡಿದ ಕೂಡಲೇ ಸಿಎಂ ಕಚೇರಿಗೆ ವಾಪಸ್ ಮಾಡಿದ್ದಲ್ಲದೆ ಸರ್ಕಾರದ ಈ ಭ್ರಷ್ಟಾಚಾರವನ್ನು ಖಂಡಿಸಿದ್ದಾರೆ ಎಂದು ತಿಳಿದುಬಂದಿದೆ. ದೀಪಾವಳಿಯ ಸಂದರ್ಭದಲ್ಲಿ ಕರ್ನಾಟಕದ ಆಯ್ದ ಪತ್ರಕರ್ತರಿಗೆ ಮುಖ್ಯಮಂತ್ರಿಗಳ ಕಚೇರಿಯಿಂದ ಸಿಹಿತಿಂಡಿಗಳ ಜೊತೆಗೆ ತಲಾ 2.5 ಲಕ್ಷ ರೂಗಳನ್ನು ಗಿಫ್ಟ್ ರೂಪದಲ್ಲಿ ಲಂಚ ನೀಡಿರುವ ಆರೋಪದ ಆಘಾತಕಾರಿ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. “ದೀಪಾವಳಿಯ ಸಂದರ್ಭದಲ್ಲಿ, ಕರ್ನಾಟಕದ ಬಹುತೇಕ ಎಲ್ಲಾ ಪತ್ರಕರ್ತರು ಮುಖ್ಯಮಂತ್ರಿಗಳ ಕಚೇರಿಯಿಂದ ಸಿಹಿತಿಂಡಿಗಳು ಮತ್ತು ತಲಾ 2.5 ಲಕ್ಷ ನಗದು ಉಡುಗೊರೆಯಾಗಿ ನೀಡಿದ್ದಾರೆ. ದಯವಿಟ್ಟು ಚುನಾವಣೆಯವರೆಗೂ ಮಾಧ್ಯಮಗಳಿಂದ ಸರ್ಕಾರದ ವಿರೋಧಿ ಸುದ್ದಿಗಳನ್ನು ನಿರೀಕ್ಷಿಸಬೇಡಿ” ಎಂಬ ವೈರಲ್ ವಾಟ್ಸಾಪ್ ಸಂದೇಶದ ಜಾಡು ಹಿಡಿದು ಹೊರಟಾಗ ಸರ್ಕಾರದ ಬೃಹತ್ ಭ್ರಷ್ಟಾಚಾರ ಬಯಲಿಗೆ ಬಂದಿದೆ. ಕೆಲ ಪತ್ರಕರ್ತರು ಸಿಹಿ ತಿಂಡಿಯ ಪೊಟ್ಟಣದ ಜೊತೆ ನೋಟಿನ ಕಂತೆ ನೋಡಿದ ಕೂಡಲೇ ಸಿಎಂ ಕಚೇರಿಗೆ ವಾಪಸ್ ಮಾಡಿದ್ದಲ್ಲದೆ ಸರ್ಕಾರದ ಈ ಭ್ರಷ್ಟಾಚಾರವನ್ನು ಖಂಡಿಸಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಕೆಲವು ಟಿವಿ ಚಾನೆಲ್‌ ನಿರೂಪಕರಿಗೆ ಮತ್ತು ರಾಜಕೀಯ ವಿಷಯಗಳನ್ನು ಕವರ್ ಮಾಡುವವರಿಗೆ ಸಹ 5 ಲಕ್ಷ ರೂಗಳ ವರೆಗೆ ಹಣ ನೀಡಿರುವುದನ್ನು ಮೂಲಗಳು ಖಚಿತಪಡಿಸಿವೆ. ಅದೇ ಸಂದರ್ಭದಲ್ಲಿ ಕೆಲ ಪತ್ರಿಕೆಗಳಿಗೆ ಕೇವಲ ಸಿಹಿ ತಿಂಡಿಗಳ ಪೊಟ್ಟಣಗಳನ್ನು ನೀಡಲಾಗಿದೆ ಎಂದು ತಿಳಿದುಬಂದಿದೆ. ಈ ಕುರಿತು ಪ್ರಜಾವಾಣಿಯ ಸಿಇಓ ಸೀತಾರಾಮನ್ ಶಂಕರ್‌ರವರಿಗೆ ಕರೆ ಮಾಡಿದಾಗ, “ಸಾರಿ, ನೋ ಕಮೆಂಟ್” ಎಂದು ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ಪಡೆಯಲು ಸಿಎಂ ಕಚೇರಿಯ ಮಾಧ್ಯಮ ಕಾರ್ಯದರ್ಶಿ ಮೋಹನ್ ಕೃಷ್ಣರವರನ್ನು ನಾನುಗೌರಿ.ಕಾಂ ವತಿಯಿಂದ ಸಂಪರ್ಕಿಸಲಾಯಿತು. ಅವರು, “ನಾನು ಯಾರಿಗೂ ಹಣ ಕೊಟ್ಟಿಲ್ಲ, ಹುಷಾರಿಲ್ಲದ ಕಾರಣದಿಂದ 15 ದಿನದಿಂದ ಕಚೇರಿಗೆ ನಾನು ಹೋಗಿಲ್ಲ, ಹಾಗಾಗಿ ಈ ಬಗ್ಗೆ ನನಗೆ ತಿಳಿದಿಲ್ಲ” ಎಂದರು. ಈ ಕುರಿತು ಸ್ಪಷ್ಟೀಕರಣ ಪಡೆಯಲು ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕರಾದ ಪಾಗೋಜಿ ಶಂಕರ್‌ರವರಿಗೆ ಸಂಪರ್ಕಿಸಲು ಯತ್ನಿಸಲಾದರೂ ಅವರು ಕರೆಗೆ ಲಭ್ಯವಾಗಿಲ್ಲ. ಅವರ ಪ್ರತಿಕ್ರಿಯೆ ಸಿಕ್ಕ ನಂತರ ಅಪ್ಡೇಟ್ ಮಾಡಲಾಗುತ್ತದೆ. ಸರ್ಕಾರದ ಈ ನಡೆಯಿಂದ ಹಬ್ಬದ ಉಡುಗೊರೆ ರೂಪದಲ್ಲಿ ಕೋಟ್ಯಾಂತರ ರೂಗಳನ್ನು ಪತ್ರಕರ್ತರಿಗೆ ನೀಡುವ ಮೂಲಕ ಸರ್ಕಾರ ಏನನ್ನು ಸಾಧಿಸಲು ಹೊರಟಿದೆ? ಇಷ್ಟು ಹಣ ಎಲ್ಲಿಂದ ಬಂತು? ಅದರ ಮೂಲವೇನು? ಎಂಬ ಪ್ರಶ್ನೆಗಳು ಹುಟ್ಟಿಕೊಂಡಿವೆ.

ರಾಜ್ಯ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವಾಗ ಸರ್ಕಾರ ಪತ್ರಕರ್ತರಿಗೆ ಹಣದ ರೂಪದಲ್ಲಿ ಉಡುಗೊರೆ ನೀಡುವ ಮೂಲಕ ಅವರು ಪಕ್ಷಪಾಗಿಗಳಾಗಿ ವರ್ತಿಸಲು ಲಂಚದ ಆಮಿಷ ಒಡ್ಡುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ. ಇದೇ ಸಂದರ್ಭದಲ್ಲಿ ಸಚಿವರೊಬ್ಬರು ಪತ್ರಕರ್ತರಿಗೆ ಚಿನ್ನದ ನಾಣ್ಯಗಳನ್ನು ಉಡುಗೊರೆಯಾಗಿ ನೀಡಿದ್ದಾರೆ ಎಂಬ ಮಾತುಗಳು ಸಹ ಹರಿದಾಡುತ್ತಿವೆ.. ಸಮಾಜ ತಿದ್ದುವಲ್ಲಿ ಪತ್ರಕರ್ತರ ಪಾತ್ರವು ಬವು ಮುಖ್ಯವಾಗಿದ್ದು, ಆದ್ದರಿಂದ ಇಂತಹ ಪ್ರಕರಣಗಳು ಸಹ ಬೆಳಕಿಗೆ ತಂದಿರುವುದು ಒಂದು ಉದಾಹರಣೆ.

ವರದಿ – ಪತ್ರಿಕೆ ಕೃಪೆ   

Leave a Reply

Your email address will not be published. Required fields are marked *