ನಾರಿನಾಳ ಗ್ರಾಮದ ಸರಕಾರಿ ಹಿರಿಯ ಪ್ರಾಥಮೀಕ ಶಾಲೆಯಲ್ಲಿ ಏಳನೇ ತರಗತಿ ವಿದ್ಯಾರ್ಥಿಗಳಿಂದ ಅದ್ದೂರಿ ಬೀಳ್ಕೊಡುವ ಸಮಾರಂಭ.

Spread the love

ನಾರಿನಾಳ ಗ್ರಾಮದ ಸರಕಾರಿ ಹಿರಿಯ ಪ್ರಾಥಮೀಕ ಶಾಲೆಯಲ್ಲಿ ಏಳನೇ ತರಗತಿ ವಿದ್ಯಾರ್ಥಿಗಳಿಂದ ಅದ್ದೂರಿ ಬೀಳ್ಕೊಡುವ ಸಮಾರಂಭ.

ಕುಷ್ಟಗಿ ತಾಲೂಕಿನ ನಾರಿನಾಳ ಗ್ರಾಮದ ಸರ್ಕಾರಿ ಮಾಧ್ಯಮಿಕ ಶಾಲೆಯಲ್ಲಿ ಏಳನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭ ಇಂದು ಅದ್ದೂರಿಯಾಗಿ ಜರುಗಿತು. ಶಾಲಾ ಮಕ್ಕಳಿಂದ ಮಹಾ ಸರಸ್ವತಿ ಪೂಜಾ ಕಾರ್ಯಕ್ರಮ ಜರುಗಿತು, ತದ ನಂತರ ಏಳನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭ ಕಾರ್ಯಕ್ರಮದಲ್ಲಿ 1 ತರಗತಿಯಿಂದ 7 ತರಗತಿಯ ಮಕ್ಕಳವರೆಗೂ ಸಾಂಸ್ಕೃತಿಕ ಕಾರ್ಯಕ್ರಮವು ಅದ್ದೂರಿಯಾಗಿ ಜರುಗಿತು. ಮಕ್ಕಳ ಪಾಲಕರು ಮಧ್ಯಾಹ್ನ 3:00 ಶಾಲೆಗೆ ಹಾಜರಾಗಿ ಮಕ್ಕಳನ್ನು ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ತಯಾರಿಸಲು ಪಾಲಕರು ಮುಂದಾದರು. ಅರಿವಿನ ಮೂಲಕ ತಾವು ಸಂಪಾದಿಸಿದ ಜ್ಞಾನವನ್ನು ಸಮಾಜದ ಒಳಿತಿಗೆ ಬಳಕೆ ಮಾಡಬೇಕು.ಎಂದು ಸರಕಾರಿ ಮುಖ್ಯೋಪಾಧ್ಯರು ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು. ವಿದ್ಯಾರ್ಥಿಗಳನ್ನು ಉದ್ದೇಶಿಸಿ ಶಿಸ್ತು, ಸಮಯ ಪ್ರಜ್ಞೆ ಮತ್ತು ಜೀವನದಲ್ಲಿ ಯಶಸ್ಸುಗಳಿಸಲು ಆತ್ಮವಿಶ್ವಾಸ ಬಹಳ ಪ್ರಾಮುಖ್ಯವೆಂದು ವಿದ್ಯಾರ್ಥಿಗಳಿಗೆ ಕೆಲವು ನಿದರ್ಶನಗಳ ಮೂಲಕ ತಮ್ಮದೇ ಜೀವನದ ಕೆಲವೊಂದು ಅನುಭವದ ಘಟನೆಗಳನ್ನು ವಿವರಿಸಿ ಶುಭನುಡಿಗಳನ್ನಾಡಿದರು. ಗ್ರಾ.ಪಂ. ಸದಸ್ಯರಾದ ಹನುಮಂತಪ್ಪಮಡ್ಡೇರ್, ನಿಂಗಪ್ಪ ಮೇಂಟಿಗೇರಿ, ಶರಣಪ್ಪ ಮೆಣೇದಾಳ, ಬಸವರಾಜ ಕಿಡದೂರುಮ ಹಾಗೂ ಶಾಲಾ ಮುಖ್ಯ ಶಿಕ್ಷಕರಾದ ನಾಗರಾಜ ಐಲಿ, ಮಾನಪ್ಪ, ಯಲ್ಲಪ್ಪ, ಯಾಸೀನ್, ಶಂಕರಗೌಡ ನಾಯಕ ಸೀತಾ ದೇವದಾರ  ಹಾಗೂ ದೊಡ್ಡ ಬಸವ ತಳವಾರ ಎಸ್.ಡಿ.ಎಮ್.ಸಿ.ಅದ್ಯಕ್ಷರಾದ ಶಂಕ್ರಪ್ಪ ಉಪ್ಪಳ, ನಾರಾಯಣಪ್ಪ ಪೂಜಾರಿ, ಶಿವಬಸಪ್ಪ ಅಂಗಡ್ಡಿ, ಎಸ್.ಡಿ.ಎಮ್.ಸಿ.ಸದಸ್ಯರಾದ ಡಿ.ಜೆ.ಬಸವರಾಜ, ಅಮರೇಶಗೌಡ, ಬಾಲವಂತ, ಉಪ್ಪಳೇಶ ವಿ.ನಾರಿನಾಳ,ರುದ್ರೇಶ ಗೌಡ ಹಾಗೂ ಊರಿನ ಗುರು/ಹಿರಿಯರು, ಶಾಲಾ ಮಕ್ಕಳು, ಪೋಷಕರು, ಮಹಿಳೆಯರು ಭಾಗವಹಿಸಿದ್ದರು.ವಿದ್ಯಾರ್ಥಿಗಳು ತಮಗೆ ಸಿಗುವ ಅವಕಾಶಗಳನ್ನು ಶ್ರದ್ಧೆಯಿಂದ ಬಳಸಿಕೊಂಡು ಜೀವನದಲ್ಲಿ ಉನ್ನತ ಮಟ್ಟಕ್ಕೇರಲಿ ಮತ್ತು ಸಮಾಜ ಮತ್ತು ರಾಷ್ಟ್ರಕ್ಕೆ ಉತ್ತಮ ಕೊಡುಗೆಯಾಗಿ ಹೊರಹೊಮ್ಮಲಿ ಎಂದು ಹಾರೈಸಿದರು. ವೇದಿಕೆಯಲ್ಲಿ ಉಪಸ್ಥಿತರಿದ್ದ ನರೇಂದ್ರ ಪದವಿ ಪೂರ್ವಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ ಇವರು ವಿದ್ಯಾರ್ಥಿಗಳಿಗೆ ಅವರ ಉಜ್ವಲ ಭವಿಷ್ಯಕ್ಕೆ ಶುಭ ಹಾರೈಸುತ್ತಾ, ಜ್ಞಾನ ಸಂಪಾದನೆಗೆ ಶ್ರಮಿಸಿದಷ್ಟೂ ವ್ಯಕ್ತಿತ್ವ ವಿಕಸನಗೊಳ್ಳುತ್ತದೆ. ಉಜ್ವಲ ಭವಿಷ್ಯ ಹೊಂದಲು ನಾಂದಿಯಾಗುತ್ತದೆ. ಇದರಿಂದ ಇತರರ ಬದುಕು, ಬವಣೆಗೆ ಸ್ಪಂದಿಸುವ ಮನೋಭಾವ ಬೆಳೆಸಿಕೊಳ್ಳಿ ಎಂದು ಹೇಳಿದರು.

ವರದಿ – ಉಪ್ಪಳೇಶ ವಿ.ನಾರಿನಾಳ.

Leave a Reply

Your email address will not be published. Required fields are marked *