ಮುಖ್ಯಮಂತ್ರಿ ಸಿದ್ದರಾಮಯ್ಯರವರ ಅಭಿನಂದನಾ ಪತ್ರದಲ್ಲಿ.
ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲ್ಲೂಕಿನ ಸುಗ್ಗೇನಹಳ್ಳಿ ಗ್ರಾಮದ ನಿವಾಸಿ ಶ್ರೀ ಪಿ.ರಾಜಮ್ಮ ಅವರ ಸಾಮಾಜಿಕ ಕಳಕಳಿ ಅನನ್ಯವಾದುದು, ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದವರು ಎದುರಿಸುವ ಸವಾಲುಗಳು ಮತ್ತು ಹೋರಾಟದ ಬದುಕಿನ ನಡುವೆಯೂ ತಮ್ಮ ಸಮಾಜ ಸೇವೆ ಆದರ್ಶಪ್ರಾಯವಾಗಿದೆ, ಬಡತನದ ಕಾರಣದಿಂದ ಶಾಲೆಗೆ ಹೋಗಲು ಸಾಧ್ಯವಾಗದೇ ಶಿಕ್ಷಣದಿಂದ ವಂಚಿತರಾಗಿದ್ದ ರಾಜಮ್ಮನವರು ಮಕ್ಕಳಿಗೆ, ವಿದ್ಯಾಭ್ಯಾಸಕ್ಕೆ ಅನುಕೂಲವಾಗುವಂತೆ ಸಮವಸ್ತ್ರ, ಬಟ್ಟೆ, ಪುಸ್ತಕ ಹಾಗೂ ಲೇಖನ ಸಾಮಗ್ರಿಗಳನ್ನು ನೀಡುತ್ತಿರುವ ತಮ್ಮ ಉದಾತ್ತ ಚಿಂತನೆ ಶ್ಲಾಘನೀಯವಾದುದು.
ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆಯನ್ನು ತರುವ ಪಿ. ರಾಜಮ್ಮ ಅವರ ನಿಸ್ವಾರ್ಥ ಸೇವೆ ಸಮಾಜಕ್ಕೆ ಮಾದರಿಯಾಗಿದೆ. ರಾಜಮ್ಮನವರ ಸಮಾಜಮುಖಿ ಕಾರ್ಯಕ್ಕೆ ನನ್ನ ಅಭಿನಂದನೆಗಳನ್ನು ಸಲ್ಲಿಸುತ್ತೇನೆoದು ತಿಳಿಸಿರುತ್ತಾರೆ,
ಸದರಿ ರಾಜಮ್ಮನವರ ಸಮಾಜ ಮುಖಿ ಕಾರ್ಯವನ್ನು ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯರಾದ ಮೋಹನ್ ಕುಮಾರ್ ದಾನಪ್ಪನವರು ಮುಖ್ಯಮಂತ್ರಿ ಸಿದ್ದರಾಮಯ್ಯರವರ ಗಮನಕ್ಕೆ ತಂದಿದ್ದರು!