ಮೂಡುಬಿದಿರಿಯಲಿ ಸಾರ್ವಜನಿಕರಿಗೆ ಕೋವಿಶೀಲ್ಡ್ ಲಸಿಕೆ ನೀಡುವ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು.

Spread the love

ಮೂಡುಬಿದಿರಿಯಲಿ ಸಾರ್ವಜನಿಕರಿಗೆ ಕೋವಿಶೀಲ್ಡ್ ಲಸಿಕೆ ನೀಡುವ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು.

ಮೂಡುಬಿದಿರೆ ಶ್ರೀ ವೆಂಕಟರಮಣ ಮತ್ತು ಶ್ರೀ ಹನುಮಂತ ದೇವಸ್ಥಾನದ ವತಿಯಿಂದ ಕೆ.ಎಸ್.ಹೆಗ್ಡೆ ಚಾರಿಟೇಬಲ್ ಹಾಸ್ಪಿಟಲ್ ಸಹಯೋಗದಲ್ಲಿ ದೇವಳದ ವಠಾರದಲ್ಲಿ ಸಾರ್ವಜನಿಕರಿಗೆ ಕೋವಿಶೀಲ್ಡ್ ಲಸಿಕೆ ನೀಡುವ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ ಎಂ, ಮಾಜಿ ಶಾಸಕರಾದ ಅಭಯಚಂದ್ರ ಜೈನ್, ಪುರಸಭಾಧ್ಯಕ್ಷ  ಪ್ರಸಾದ್ ಕುಮಾರ್, ಉಪಾಧ್ಯಕ್ಷೆ  ಶ್ರೀಮತಿ ಸುಜಾತ, ಹಿರಿಯ ವಕೀಲರು ಬಾಹುಬಲಿ ಪ್ರಸಾದ್, ತಹಸೀಲ್ದಾರ್ ಪುಟ್ಟರಾಜು, ಪುರಸಭೆ ಮುಖ್ಯಾಧಿಕಾರಿ ಶ್ರೀಮತಿ ಇಂದು, ದೇವಳದ ಆಡಳಿತ ಮೊಕ್ತೇಸರರಾದ ಜಿ.ಉಮೇಶ್ ಪೈ, ಮೊಕ್ತೇಸರರಾದ  ರಘುವೀರ ಶೆಣೈ, ರಾಘವೇಂದ್ರ ಪ್ರಭು, ಶಿವಾನಂದ ಪ್ರಭು, ಶಾಂತರಾಮ್ ಕುಡ್ವ, ಮನೋಜ್ ಶೆಣೈ ಹಾಗು ಪುರಸಭಾ ಸದಸ್ಯರು ಉಪಸ್ಥಿತರಿದ್ದರು.

ವರದಿ –  ಮಹೇಶ ಶರ್ಮಾ

Leave a Reply

Your email address will not be published. Required fields are marked *