ಹಾಸನದಲ್ಲಿ ಅನಾಥ ಮಕ್ಕಳ ಆರೈಕೆ ನಮ್ಮ ಜವಾಬ್ದಾರಿ  ಎಂದ ಸಚಿವೆ ಸೌ. ಶಶಿಕಲಾ ಜೊಲ್ಲೆ ಜಿ, ಯವರು.

Spread the love

ಹಾಸನದಲ್ಲಿ ಅನಾಥ ಮಕ್ಕಳ ಆರೈಕೆ ನಮ್ಮ ಜವಾಬ್ದಾರಿ  ಎಂದ ಸಚಿವೆ ಸೌ. ಶಶಿಕಲಾ ಜೊಲ್ಲೆ ಜಿ, ಯವರು.

ಹಾಸನದಲ್ಲಿ ಸಂಭಾವನೀಯ ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ಧತೆ ಹಾಗೂ ಅನಾಥ ಮಕ್ಕಳ ಆರೈಕೆ ಕುರಿತು ಅಧಿಕಾರಿಗಳೊಂದಿಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಯವರು ಸಭೆ ನಡೆಸಿ, ಸಮಾಲೋಚನೆ ನಡೆಸಿದರು. ಕೋವಿಡ್ ಸೋಂಕಿತರಾದ ಮಕ್ಕಳ ಚಿಕಿತ್ಸೆಗಾಗಿ ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳ ಬೆಡ್ ವ್ಯವಸ್ಥೆ ಹಾಗೂ ಮಕ್ಕಳೊಂದಿಗೆ ಅವರ ತಾಯಂದಿರಿಗೂ ಉಳಿದುಕೊಳ್ಳಲು ವ್ಯವಸ್ಥೆ ಮಾಡುತ್ತಿದ್ದೇವೆ. ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್, ಎನ್ ಐಸಿಯು, ಪಿಐಸಿಯು, ವೆಂಟಿಲೇಟರ್ ಅಳವಡಿಕೆಗೆ ಸಿದ್ಧತೆ ನಡೆಯುತ್ತಿದೆ. ಜಿಲ್ಲೆಯಲ್ಲಿ ಮಕ್ಕಳ ತಜ್ಞರ ಕೊರತೆಯಾಗಬಾರದು. ನಮ್ಮ ಇಲಾಖೆ ವತಿಯಿಂದ ಎಲ್ಲಾ ತಾಲ್ಲೂಕುಗಳಲ್ಲಿ ಕೋವಿಡ್ ಕೇರ್ ಸೆಂಟರ್ ಗೆ ಸ್ಥಳ ಗುರುತಿಸಿದ್ದು, ಸಿದ್ಧತೆ ನಡೆಯುತ್ತಿದೆ. ಅಪೌಷ್ಟಿಕ ಮಕ್ಕಳಲ್ಲಿ ಪೌಷ್ಟಿಕತೆ ಹೆಚ್ಚಾಗಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಶಾಸಕರು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಹಾಜರಿದ್ದರು.

ವರದಿ – ಮಹೇಶ ಶರ್ಮಾ

Leave a Reply

Your email address will not be published. Required fields are marked *