ಕೃಷ್ಣಾ ನದಿ ತೀರದ ಗ್ರಾಮಗಳ ರೈತರಿಗೆ ಅನುಕೂಲವಾಗಲಿ ಎಂದು ಕಾಗವಾಡ ಮತ ಕ್ಷೇತ್ರದ ಜನಪ್ರಿಯ ಶಾಸಕ ವಿದ್ಯುತ್ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ

Spread the love

ಕೃಷ್ಣಾ ನದಿ ತೀರದ ಗ್ರಾಮಗಳ ರೈತರಿಗೆ ಅನುಕೂಲವಾಗಲಿ ಎಂದು ಕಾಗವಾಡ ಮತ ಕ್ಷೇತ್ರದ ಜನಪ್ರಿಯ ಶಾಸಕ ವಿದ್ಯುತ್ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ

ಕೃಷ್ಣಾ ನದಿ ತೀರದ ಗ್ರಾಮಗಳ ರೈತರಿಗೆ ಅನುಕೂಲವಾಗಲಿ ಎಂದು ಕಾಗವಾಡ ಮತ ಕ್ಷೇತ್ರದ ಜನಪ್ರಿಯ ಶಾಸಕರು ಹಾಗೂ ರಾಜ್ಯ ಸರ್ಕಾರ ಕೈಮಗ್ಗ ಮತ್ತು ಜವಳಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವರಾದ ಸನ್ಮಾನ್ಯ ಶ್ರೀ ಶ್ರೀಮಂತ (ತಾತ್ಯಾ) ಪಾಟೀಲ ಅವರು ವಿದ್ಯುತ್ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ದಿನದ 20 ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಮಾಡಿದ್ದರಿಂದ ಶೇಡಬಾಳ, ಲೋಕೂರ, ಮಂಗಸೂಳಿ ಗ್ರಾಮದ ರೈತರು ಸಂತೋಷ ವ್ಯಕ್ತಪಡಿಸಿ ಅಭಿನಂದಿಸಿದರು.  ಈ ಸಮಯದಲ್ಲಿ ಮುಖಂಡರಾದ ಶ್ರೀ ದಾದಾಗೌಡ ಪಾಟೀಲ, ಶ್ರೀ  ಸುಭಾಸ ಕಠಾರೆ, ಶ್ರೀ ರವೀಂದ್ರ ಪೂಜಾರಿ, ಶ್ರೀ ಭರತಗೌಡ ಪಾಟೀಲ, ಶ್ರೀ ಸುಧಾಕರ ಭಗತ, ಶ್ರೀ ರಾಜರಾಮ ಗಡದೆ ಹಾಗೂ ಸ್ಥಳೀಯ ಹಲವಾರು ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ –  ಮಹೇಶ ಶರ್ಮಾ

Leave a Reply

Your email address will not be published. Required fields are marked *