ದೇಶದ ಹಿತಕ್ಕಾಗಿ ಶ್ರಮಿಸಿದ ಧೀಮಂತ ಚೇತನ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ನೆನಪು ಸದಾ ಅಮರ….
ಇಂದು ನಿಪ್ಪಾಣಿ ಮತಕ್ಷೇತ್ರದ ಭಾಟನಾಗನೂರಿನಲ್ಲಿ, ದೇಶದ ಅಖಂಡತೆಗೆ ಶ್ರಮಿಸಿದ ಧೀಮಂತ ನಾಯಕ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಪುಣ್ಯಸ್ಮರಣೆ ನಿಮಿತ್ತವಾಗಿ, ಬಿಜೆಪಿ ಗ್ರಾಮೀಣ ಯುವಮೋರ್ಚಾ ಹಾಗೂ ಮಹಿಳಾ ಮೋರ್ಚಾದ ವತಿಯಿಂದ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಹಾಗೂ ಬಸವಜ್ಯೋತಿ ಯೂಥ ಫೌಂಡೇಶನ ಅಧ್ಯಕ್ಷ್ಯರಾದ ಕು. ಬಸವಪ್ರಸಾದ ಜೊಲ್ಲೆ ಯವರು ಸಸಿಗಳನ್ನು ನೆಟ್ಟರು. ದೇಶದ ಏಕತೆ ಮತ್ತು ಸಮಗ್ರತೆಗಾಗಿ ತಮ್ಮ ಜೀವನವನ್ನೇ ಮುಡುಪಾಗಿಟ್ಟ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಪುಣ್ಯಸ್ಮರಣೆಯ ಸ್ಮರಣಾರ್ಥ ಬಿಜೆಪಿ ಪಕ್ಷ ಬೂತ್ ಮಟ್ಟದಲ್ಲಿ ಹಲವು ಪರಿಸರ ಸ್ನೇಹಿ ಕಾರ್ಯಕ್ರಮ ಹಮ್ಮಿಕೊಂಡಿದೆ. ನಿಪ್ಪಾಣಿ ಮತಕ್ಷೇತ್ರದೊಳಗೆ ಸುಮಾರು 50 ಸಾವಿರ ಸಸಿಗಳನ್ನು ನೆಡುವ ಗುರಿಯಿಟ್ಟುಕೊಂಡಿದ್ದೇವೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಯುವಮೋರ್ಚಾ ಹಾಗೂ ಮಹಿಳಾ ಮೋರ್ಚಾದ ಸದಸ್ಯರು, ಊರಿನ ಹಿರಿಯರು, ಗಣ್ಯರು, ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
ವರದಿ – ಮಹೇಶ ಶರ್ಮಾ