ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ನಡೆ, ನುಡಿ ನಮಗೆಲ್ಲರಿಗೂ ಅನುಕರಣೀಯ..

Spread the love

ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ನಡೆ, ನುಡಿ ನಮಗೆಲ್ಲರಿಗೂ ಅನುಕರಣೀಯ..

ಇಂದು ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯ ಮಾಂಜರಿ ಗ್ರಾಮದಲ್ಲಿ, ಜನಸಂಘದ ಸ್ಥಾಪಕರಾದ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಪುಣ್ಯಸ್ಮರಣೆ ನಿಮಿತ್ತವಾಗಿ, ಚಿಕ್ಕೋಡಿ ಸದಲಗಾ ಬಿಜೆಪಿ ಮಂಡಲ ಯುವಮೋರ್ಚಾದ ವತಿಯಿಂದ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಸಸಿಗಳನ್ನು ನೆಟ್ಟರು. ದೇಶದ ಐಕ್ಯತೆಗಾಗಿ ಶ್ರಮಿಸಿದ್ದ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಪುಣ್ಯಸ್ಮರಣೆಯ ನಿಮಿತ್ತ ಬಿಜೆಪಿ ಪಕ್ಷ ಬೂತ್ ಮಟ್ಟದಲ್ಲಿ ಹಲವು ಪರಿಸರ ಸ್ನೇಹಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಚಿಕ್ಕೋಡಿ ಮತಕ್ಷೇತ್ರದೊಳಗೆ ಸುಮಾರು 2 ಸಾವಿರ ಸಸಿಗಳನ್ನು ನೆಡುವ ಗುರಿಯಿಟ್ಟುಕೊಂಡಿದ್ದೇವೆ ಎಂದು ಹೇಳಿದರು.  ಈ ಸಂದರ್ಭದಲ್ಲಿ  ಬಿಜೆಪಿ ಮಂಡಲ ಅಧ್ಯಕ್ಷರಾದ ಶ್ರೀ ಸಂಜಯ ಪಾಟೀಲ, ಯುವಮೋರ್ಚಾ ಅಧ್ಯಕ್ಷರಾದ ಶ್ರೀ ವಿಕಾಸ ಪಾಟೀಲ, ಸದಸ್ಯರು, ಊರಿನ ಹಿರಿಯರು,  ಗಣ್ಯರು, ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

  ವರದಿ – ಮಹೇಶ ಶರ್ಮಾ

Leave a Reply

Your email address will not be published. Required fields are marked *