ಜುಮಲಾಪೂರ ಗ್ರಾಮ ಪಂಚಾಯಿತಿಯಲ್ಲಿ ಘನ ತ್ಯಾಜ್ಯ ವಿಲೇವಾರಿ ಘಟಕದ ಭೂಮಿ ಪೂಜೆ ನೇರವರಿಸಿದ ತಾ ಪಂ ಕಾರ್ಯ ನಿರ್ವಾಹಕ ಅಧಿಕಾರಿ ಡಾ ಜಯರಾಂ ಚವ್ಹಾಣ ಗ್ರಾಮ ಪಂಚಾಯ್ತಿ ಅಧ್ಯಕ್ಷ ಅಕ್ಕಮ್ಮ ದಂಡಿನ..

Spread the love

ಜುಮಲಾಪೂರ ಗ್ರಾಮ ಪಂಚಾಯಿತಿಯಲ್ಲಿ ಘನ ತ್ಯಾಜ್ಯ ವಿಲೇವಾರಿ ಘಟಕದ ಭೂಮಿ ಪೂಜೆ ನೇರವರಿಸಿದ ತಾ ಪಂ ಕಾರ್ಯ ನಿರ್ವಾಹಕ ಅಧಿಕಾರಿ ಡಾ ಜಯರಾಂ ಚವ್ಹಾಣ ಗ್ರಾಮ ಪಂಚಾಯ್ತಿ ಅಧ್ಯಕ್ಷ ಅಕ್ಕಮ್ಮ ದಂಡಿನ..

ಸ್ವಚ್ಛ ಭಾರತ್‌ ಯೋಜನೆಯಡಿ  ಗ್ರಾಮ ಪಂಚಾಯಿತಿಗಳಲ್ಲಿ ಸಂಗ್ರಹವಾದ ಘನ ತ್ಯಾಜ್ಯವನ್ನು ಸ್ಥಳೀಯವಾಗಿಯೇ ವಿಲೇವಾರಿ ಮಾಡುವ ಸಲುವಾಗಿ ಗ್ರಾ.ಪಂ. ಮಟ್ಟದಲ್ಲೇ ಘನ ತ್ಯಾಜ್ಯ ವಿಲೇವಾರಿ ಹಾಗೂ ನಿರ್ವಹಣಾ ಘಟಕವನ್ನು ನಿರ್ಮಿಸಲು  ಭೂಮಿ ಪೂಜೆಯನ್ನು ಸಾಸ್ವಿಹಾಳ ಗ್ರಾಮದ ಸರ್ಕಾರಿ ಜಾಗೆಯ 1 ಎಕರೆ ವಿಸ್ತರ್ಣ ಪ್ರದೇಶದಲ್ಲಿ ಜುಮಲಾಪೂರ ಹಾಗೂ ಮುದೇನೂರ ಗ್ರಾಮ‌ ಪಂಚಾಯತ ವ್ಯಾಪ್ತಿಯ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಮಂಗಳವಾರ ಭೂಮಿ ಪೂಜೆಯನ್ನು ಅಧ್ಯಕ್ಷೆ ಅಕ್ಕಮ್ಮ ದಂಡಿನ ನೆರವೇರಿಸಿದರು. ಗ್ರಾ.ಪಂ.ಗಳಲ್ಲಿ ಘಟಕ ನಿರ್ಮಿಸಲು ಅನುಮೋದನೆ ದೊರೆತಿದ್ದು,  ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾಸ್ವಿಹಾಳ ಗ್ರಾಮದಲ್ಲಿ ಜಾಗೆ ಗುರುತಿಸಿ, ನಿರ್ವಹಣಾ ಘಟಕದೊಂದಿಗೆ, ಹಸಿ ಕಸದಿಂದ ಗೊಬ್ಬರ ತಯಾರು ಘಟಕದ ನಿರ್ಮಾಣಕ್ಕೆ ತಯಾರಿ ನಡೆಸಲಾಗಿದೆ. ಗುತ್ತೆದಾರರು ನಿಯಮ ಬದ್ಧವಾಗಿ ಕಾಮಗಾರಿ ಕೈಗೊಳ್ಳಬೇಕು.ಸರ್ಕಾರದ ಯೋಜನೆಯನ್ನೂ ಸದುಪಯೋಗ ಪಡಿಸಿಕೊಂಡು ಆರೋಗ್ಯ ಯುಕ್ತ ಸಮಾಜ ನಿರ್ಮಾಣಕ್ಕೆ,ಸಾರ್ವಜನಿಕರು  ಕೈಜೋಡಿಸಬೇಕು.ಗ್ರಾಮಗಳ ನೈರ್ಮಲ್ಯ ಕಾಪಾಡುವ ಉದ್ಧೇಶದಿಂದ ಯೋಜನೆಯನ್ನು ರೂಪಿಸಿದ್ದು, ಇದರಡಿ ಗ್ರಾಮ ಮಟ್ಟದಲ್ಲೂ ಅದನ್ನು ಕಾರ್ಯರೂಪಕ್ಕೆ ತರುವ ನಿಟ್ಟಿನಲ್ಲಿ ತಾಪಂ ಮುಂದಡಿ ಇಟ್ಟಿದೆ. ಪಟ್ಟಣ ಹಾಗೂ ನಗರ ಪ್ರದೇಶಗಳಲ್ಲಿ ಈಗಾಗಲೇ ತ್ಯಾಜ್ಯ ವಿಲೇವಾರಿ ಘಟಕಗಳು ಕಾರ್ಯ ನಿರ್ವಹಿಸುತ್ತಿವೆ. ಅದೇ ಮಾದರಿಯಲ್ಲಿ ಗ್ರಾ.ಪಂ. ಮಟ್ಟದಲ್ಲೂ ಇಂಥಹ ಘಟಕ ನಿರ್ಮಿಸುವುದು ಯೋಜನೆಯ ಆಶಯ. ಈಗಾಗಲೇ ಮೊದಲ ಹಂತದ ಕಾಮಗಾರಿಗಳನ್ನು ಕೈಗೊಳ್ಳಲು 20 ಲಕ್ಷ ರೂ. ಬಿಡುಗಡೆಯಾಗಿದ್ದು, ಜಾಗೆಯ  ಆವರಣಗೋಡೆ,ಗೇಟ್ ಅಳವಡಿಕೆ ಘಟಕದ ಕೋಣಿ.ನಿರ್ಮಾಣ.ಈ ಹಣದಲ್ಲಿ ಕಸ ಸಾಗಣೆ ವಾಹನಗಳು ಹಾಗೂ ಇತರೆ ಅಗತ್ಯ ಉಪಕರಣಗಳನ್ನು ಖರೀದಿ ಮಾಡಲಾಗುವದು,ನಗರ ಪ್ರದೇಶಗಳಂತೆಯೇ ಗ್ರಾಮಗಳಲ್ಲಿಯೂ ಶುಚಿತ್ವ ಕಾಪಾಡಲು ಮತ್ತು ಘನ, ದ್ರವ ತ್ಯಾಜ್ಯವನ್ನು ಹೇಗೆ ನಿರ್ವಹಣೆ ಮಾಡಬೇಕು ಎಂಬುದನ್ನು ಗ್ರಾಮೀಣ ಜನರಿಗೆ ಮನವರಿಕೆ ಮಾಡಲು ಘಟಕಗವನ್ನು ಪ್ರಾರಂಭಿಸಲಾಗುತ್ತಿದ್ದು, ಗ್ರಾಮಗಳನ್ನು ಸ್ವಚ್ಛವಾಗಿಡುವ ನಿಟ್ಟಿನಲ್ಲಿ ಜನತೆಗೆ ಅರಿವು ಮೂಡಿಸಲು ಮೊದಲು ಒತ್ತು ನೀಡಲಾಗುತ್ತಿದೆ. ಜಾಗೃತಿ ಕಾರ್ಯಕ್ರಮ ರೂಪಿಸಲಾಗುತ್ತಿದೆ ಎಂದು ತಾಲೂಕ ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ಡಾ.ಜಯರಾಂ ಚವ್ಹಾಣ ಹೇಳಿದರು.  ಜನರು ಘನ ಮತ್ತು ದ್ರವ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುತ್ತಾರೆ. ಇದರಿಂದ ಗ್ರಾಮಗಳಲ್ಲಿ ಉಂಟಾಗುತ್ತಿರುವ ಅನೈರ್ಮಲ್ಯದ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ನಾವು ಇದೀಗ ಮೊದಲ ಹೆಜ್ಜೆ ಇಡಬೇಕಾಗಿದೆ ಎಂದು ಅಧ್ಯಕ್ಷೆ   ಅಕ್ಕಮ್ಮ ದಂಡಿನ್ ಹೇಳಿದರು. ಪ್ರತಿ ಮನೆಯಲ್ಲಿ ಕಸ ಹಾಕುವ ಮೊದಲು ಹಸಿ, ಒಣ, ಮರು ಬಳಕೆಯಾಗುವ ಕಸ ಎಂದು ವಿಂಗಡಣೆ ಮಾಡುವಂತೆ ಆಯಾ ಗ್ರಾ.ಪಂ. ಅಧಿಕಾರಿಗಳು ಅರಿವು ಮೂಡಿಸಲಿದ್ದಾರೆ. ಗ್ರಾ.ಪಂ. ಸಿಬ್ಬಂದಿ ಕಸ ಸಾಗಣೆ ವಾಹನಗಳ ಮೂಲಕ ಮನೆಗಳ ಬಳಿಗೆ ಹೋಗಿ ಹಸಿ ಮತ್ತು ಒಣ ಕಸವನ್ನು ಪ್ರತ್ಯೇಕವಾಗಿ ಸಂಗ್ರಹಿಸಲಿದ್ದಾರೆ. ಆ ನಂತರವಷ್ಟೇ ಕಸವನ್ನು ನಿಗದಿತ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಸಾಗಣೆ ಮಾಡಲಾಗುತ್ತದೆ. ಅಲ್ಲಿನ ಸಿಬ್ಬಂದಿ ಒಣ, ಹಸಿ ಮತ್ತು ಮರು ಬಳಕೆ ಕಸವನ್ನು ಪ್ರತ್ಯೇಕಗೊಳಿಸಲಿದ್ದಾರೆ. ಹಸಿ ಕಸದಿಂದ ಎರೆಹುಳು ಗೊಬ್ಬರ ತಯಾರಿಸಲು ಸಹ ಉದ್ದೇಶಿಸಲಾಗಿದೆ. ಈ ಕುರಿತು ಈಗಾಗಲೇ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳಿಗೂ ತರಬೇತಿ ಕಾರ್ಯಾಗಾರವನ್ನು ನಡೆಸಲಾಗಿದೆ. ಸಂಪನ್ಮೂಲ ವ್ಯಕ್ತಿಗಳಿಂದ ಪಿಡಿಒಗಳಿಗೆ ತರಬೇತಿ ಕೊಡಿಸಲಾಗಿದೆ.ಗ್ರಾಮೀಣ ಭಾಗದಲ್ಲೂ ಕಸ ವಿಲೇವಾರಿ ನಿರ್ವಹಣಾ ಘಟಕಗಳ ನಿರ್ಮಾಣಕ್ಕೆ ಉದ್ದೇಶಿಸಲಾಗಿದ್ದು, ಸದ್ಯಕ್ಕೆ ಘಟಕವನ್ನು ನಿರ್ಮಾಣಕ್ಕೆ ತಯಾರಿ ನಡೆದಿದೆ ಎಂದು ಸಹಾಯಕ ನಿರ್ದೇಶಕ ವೆಂಕಟೇಶ ವಂದಾಲ ಹೇಳಿದರು. ಈ ಸಮಯದಲ್ಲಿ ತಾಲೂಕ ನರೇಗಾ ತಾಂತ್ರಿಕ ಸಂಯೋಜಕರಾದ ತನ್ವಿರ್, ಅಭಿವೃದ್ಧಿ ಅಧಿಕಾರಿ ನಾಗೇಶ ಅಳಿಗನೂರ, ಸೇರಿದಂತೆ ಇತರೆ ಗ್ರಾಪಂ ಸದಸ್ಯರು, ಸಿಬ್ಬಂದಿಸಾರ್ವಜನಿಕರು ಇದ್ದರು.

ವರದಿ – ಅಮಾಜಪ್ಪ ಹೆಚ್.ಜುಮಾಲಾಪೂರ

Leave a Reply

Your email address will not be published. Required fields are marked *