75 ನೇ ಸ್ವಾತಂತ್ರೋತ್ಸವ ಅಂಗವಾಗಿ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಧ್ವಜಾರೋಹಣ ನೆರವೇರಿಸಿದರು.

Spread the love

75 ನೇ ಸ್ವಾತಂತ್ರೋತ್ಸವ ಅಂಗವಾಗಿ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಧ್ವಜಾರೋಹಣ ನೆರವೇರಿಸಿದರು.

ಇಂದು ನಿಪ್ಪಾಣಿಯ ಮುನ್ಸಿಪಲ್ ಹೈಸ್ಕೂಲ್ ಆವರಣದಲ್ಲಿ, 75 ನೇ ಸ್ವಾತಂತ್ರೋತ್ಸವ ಅಂಗವಾಗಿ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಧ್ವಜಾರೋಹಣ ನೆರವೇರಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಬಳಿಕ ಎಸ್.ಎಸ್.ಎಲ್.ಸಿ  ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ಇನ್ನಷ್ಟು ಸಾಧನೆ ಮಾಡಿ, ಉಜ್ವಲ ಭವಿಷ್ಯ ನಿಮ್ಮದಾಗಲಿ ಎಂದು ಹಾರೈಸಿದರು.  ಈ ಸಂದರ್ಭದಲ್ಲಿ ತಹಶೀಲ್ದಾರರಾದ ಶ್ರೀ ಮೋಹನ್ ಭಸ್ನೆ, ಪೌರಯುಕ್ತರಾದ ಶ್ರೀ ಜಗದೀಶ ಹುಲಗೆಜ್ಜಿ, ಹಾಲಸಿದ್ದನಾಥ ಸಕ್ಕರೆ ಕಾರ್ಖಾನೆಯ ಅಧ್ಯಕ್ಷರಾದ ಶ್ರೀ ಚಂದ್ರಕಾಂತ  ಕೋಟಿವಾಲೆ, ಬಿಇಓ ಶ್ರೀಮತಿ ರೇವತಿ ಮಠದ, ಸಿಪಿಐ ಶ್ರೀ ಸಂಗಮೇಶ ಶಿವಯೋಗಿ, ನಿಪ್ಪಾಣಿ ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಎಪಿಎಂಸಿ ಸದಸ್ಯರು, ಜನಪ್ರತಿನಿಧಿಗಳು, ಸ್ಥಳಿಯ ಮುಖಂಡರು ಹಾಗೂ ತಾಲೂಕ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ – ಮಹೇಶ ಶರ್ಮಾ

Leave a Reply

Your email address will not be published. Required fields are marked *