ನೆರೆ ಸಂತ್ರಸ್ತರ ಸಮಸ್ಯೆ ಅರಿತು, ಅಗತ್ಯ ನೆರವು ….

Spread the love

ನೆರೆ ಸಂತ್ರಸ್ತರ ಸಮಸ್ಯೆ ಅರಿತು, ಅಗತ್ಯ ನೆರವು ….

ನಿಪ್ಪಾಣಿ ಮತಕ್ಷೇತ್ರದ ಬೂದಿಹಾಳ ಗ್ರಾಮಕ್ಕೆ ಮುಜರಾಯಿ, ಹಜ ಮತ್ತು ವಕ್ಫ್ ಇಲಾಖೆಯ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ ಯವರು ಭೇಟಿ ನೀಡಿ, ಪ್ರವಾಹ ಪೀಡಿತ ಪ್ರದೇಶಗಳನ್ನು ವೀಕ್ಷಿಸಿ, ಜನರ ಸಮಸ್ಯೆಗಳನ್ನು ಆಲಿಸಿ, ಜೊಲ್ಲೆ ಉದ್ಯೋಗ ಸಮೂಹ ಸಂಸ್ಥೆಯ ವತಿಯಿಂದ 125 ಸಂತ್ರಸ್ತ ಕುಟುಂಬಕ್ಕೆ ಆಹಾರ ಕಿಟ್ ಗಳನ್ನು ವಿತರಣೆ ಮಾಡಿದರು.ಈಗಾಗಲೇ ನೆರೆ ಪೀಡಿತ ಪ್ರದೇಶಗಳ ಸ್ಥಿತಿಯನ್ನು ನಾನು ವೀಕ್ಷಿಸಿದ್ದು, ಅಲ್ಲಿ ಹಾನಿಗೊಳಗಾದ ಪ್ರದೇಶಗಳ ಸರ್ವೇ ಕಾರ್ಯ ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅದರ ವರದಿ ಬಂದ ತಕ್ಷಣ ಪರಿಶೀಲಿಸಿ ಬಿಜೆಪಿ ಸರ್ಕಾರದ ವತಿಯಿಂದ ಸಿಗುವ ಪರಿಹಾರವನ್ನು ತಲುಪಿಸಿ, ಜನರ ಸಂಕಷ್ಟ ಬಗೆಹರಿಸಲಾಗುವುದು ಎಂದು ಹೇಳಿದರು. ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಜನಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು. ವರದಿ – ಮಹೇಶ ಶರ್ಮಾ

Leave a Reply

Your email address will not be published. Required fields are marked *