“ಕಾರ್ಯಕರ್ತರ ಬಲವೇ ಬಿಜೆಪಿ ಪಕ್ಷದ ಬಲ”

Spread the love

ಕಾರ್ಯಕರ್ತರ ಬಲವೇ ಬಿಜೆಪಿ ಪಕ್ಷದ ಬಲ

ಕೇಂದ್ರ ಹಾಗೂ ರಾಜ್ಯದಲ್ಲಿನ ಬಿಜೆಪಿ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ, ನಿಪ್ಪಾಣಿ ಮತಕ್ಷೇತ್ರದ ಅಮಲಝರಿ ಗ್ರಾಮದ ಅಷ್ಟವಿನಾಯಕ ಮಂಡಳದ ಅಧ್ಯಕ್ಷರಾದ ಶ್ರೀ ಸುರೇಶ ಕೌಂದಾಡೆ ಅವರ ನೇತೃತ್ವದಲ್ಲಿ, ಉಪಾಧ್ಯಕ್ಷರಾದ ಶ್ರೀ ಸಾಗರ ರೇಪೆ  ಹಾಗೂ ಸದಸ್ಯರು ಸೇರಿದಂತೆ 50ಕ್ಕೂ ಅಧಿಕ ಕಾಂಗ್ರೆಸ್‌ ನ ಕಾರ್ಯಕರ್ತರು ಪಕ್ಷ ತೊರೆದು, ನಮ್ಮ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡಿದ್ದು, ಅವರನ್ನು ಮುಜರಾಯಿ, ಹಜ ಮತ್ತು ವಕ್ಫ್ ಇಲಾಖೆಯ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ ಯವರು ಆತ್ಮೀಯವಾಗಿ ಸ್ವಾಗತಿಸಿದರು. ಬಿಜೆಪಿ ಪಕ್ಷವು ಜಾಗತಿಕ ಮಟ್ಟದಲ್ಲಿ ಅತಿದೊಡ್ಡ ರಾಜಕೀಯ ಪಕ್ಷವಾಗಿ ಹೊರಹೊಮ್ಮಲು ಮೂಲ ಕಾರಣವೇ ನಮ್ಮ ಕಾರ್ಯಕರ್ತರು. ಅವರ ನಿಸ್ವಾರ್ಥ ಸೇವೆ ಹಾಗೂ ತಳಮಟ್ಟದಲ್ಲಿ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಅವರ ನಿರಂತರ ಶ್ರಮ ಅಪಾರವಾಗಿದೆ. ಅಭಿವೃದ್ಧಿಯನ್ನೇ ಮೂಲಮಂತ್ರವನ್ನಾಗಿರಿಸಿಕೊಂಡಿರುವ ನಮ್ಮ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜನಪರ ಕಾರ್ಯಗಳಿಂದಾಗಿ ಜನರ ನಂಬಿಕೆ ಗಳಿಸಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸೇವೆ ಸಲ್ಲಿಸಲು ಶ್ರಮವಹಿಸಲಿದ್ದೇವೆ ಎಂದು ಹೇಳಿದರು.

ವರದಿ – ಮಹೇಶ ಶರ್ಮಾ

Leave a Reply

Your email address will not be published. Required fields are marked *