ಕನ್ನಡ ಶಾಲೆಗಳನ್ನು ಉಳಿಸಿ-ಬೆಳೆಸೋಣ..

Spread the love

ಕನ್ನಡ ಶಾಲೆಗಳನ್ನು ಉಳಿಸಿ-ಬೆಳೆಸೋಣ..

ಲಖನಾಪುರ ಗ್ರಾಮದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಗೆ, ನಬಾರ್ಡ್ ಆರ್.ಐ.ಡಿ.ಎಫ್-25 ಯೋಜನೆಯಡಿ ಮಂಜೂರಾದ 11 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾದ ನೂತನ ಕೊಠಡಿಯನ್ನು ಮುಜರಾಯಿ, ಹಜ ಮತ್ತು ವಕ್ಫ್ ಇಲಾಖೆಯ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ ಯವರು ಉದ್ಘಾಟಿಸಿದರು. ಬಳಿಕ ಗಣೇಶ ಹಬ್ಬದ ಅಂಗವಾಗಿ ಈ ಶಾಲೆಯ ವಿದ್ಯಾರ್ಥಿಗಳ ಕೈಯಲ್ಲಿ ಮೂಡಿಬಂದ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನು ವೀಕ್ಷಿಸಿದರು. ಮಣ್ಣು, ಅರಶಿನದಿಂದ ಮೂಡಿದ ಗಣೇಶನ ಮೂರ್ತಿಗಳು ಅದ್ಭುತವಾಗಿತ್ತು. ಪರಿಸರ ಮಾಲಿನ್ಯ ತಡೆಗಟ್ಟುವ ನಿಟ್ಟಿನಿಂದ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನು ಮಾಡಿ, ಸಮಾಜಕ್ಕೆ ಉತ್ತಮ ಸಂದೇಶ ನೀಡಿದ ವಿದ್ಯಾರ್ಥಿಗಳ ಈ ಕಲಾ ಪ್ರತಿಭೆ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಹಾರೈಸಿದರು.

ವರದಿ – ಮಹೇಶ ಶರ್ಮಾ

Leave a Reply

Your email address will not be published. Required fields are marked *