ಜನರ ಸದೃಢ ಆರೋಗ್ಯಕ್ಕಾಗಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ….

Spread the love

ಜನರ ಸದೃಢ ಆರೋಗ್ಯಕ್ಕಾಗಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ….

ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯ ನಿಪ್ಪಾಣಿಯ ನರವೀರ ತಾನಾಜಿ ಚೌಕದಲ್ಲಿ, ನಗರಸಭೆಯ 14 ನೇ ಹಣಕಾಸು ಯೋಜನೆಯಡಿಯಲ್ಲಿ ಮಂಜೂರಾದ 7.50 ಲಕ್ಷ ರೂ. ಮೊತ್ತದಲ್ಲಿ, ನಿರ್ಮಾಣವಾದ ಶುದ್ಧ ಕುಡಿಯುವ ನೀರು ಘಟಕವನ್ನು ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಉದ್ಘಾಟಿಸಿದರು. ಅಭಿವೃದ್ಧಿ ಕಾರ್ಯಗಳೊಂದಿಗೆ ಜನರ ಹಿತ ಕಾಪಾಡುವುದು ನಮ್ಮ ಕರ್ತವ್ಯ. ಈ ನಿಟ್ಟಿನಲ್ಲಿ ಶುದ್ಧ ಕುಡಿಯುವ ನೀರು ಪೂರೈಸುತ್ತಿದ್ದು, ಸಾರ್ವಜನಿಕರು ಹಿತಮಿತವಾಗಿ ನೀರಿನ ಸದ್ಭಳಕೆ ಮಾಡಿ, ಸದೃಢ ಆರೋಗ್ಯ ನಿಮ್ಮದಾಗಲಿ ಎಂದು ಹೇಳಿದರು. ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

ವರದಿ –ಮಹೇಶ ಶರ್ಮಾ

Leave a Reply

Your email address will not be published. Required fields are marked *