ಸಂಕೇಶ್ವರ “ಸಾರ್ವಜನಿಕರ ಉಪಯೋಗಕ್ಕಾಗಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ  ಚಾಲನೆ”

Spread the love

ಸಂಕೇಶ್ವರಸಾರ್ವಜನಿಕರ ಉಪಯೋಗಕ್ಕಾಗಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ  ಚಾಲನೆ

ಚಿಕ್ಕೋಡಿ ಲೋಕಸಭೆ ವ್ಯಾಪ್ತಿಯ ಸಂಕೇಶ್ವರ ಪಟ್ಟಣದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಜಿ ಅವರ ನೇತೃತ್ವದಲ್ಲಿ ರೂ. 3.5 ಕೋಟಿ  ವೆಚ್ಚದಲ್ಲಿ ನಿರ್ಮಿಸಿರುವ ಪುರಸಭೆಯ ನೂತನ ಕಟ್ಟಡ ಮತ್ತು 4.00 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾದ ಹೈಟೆಕ್ ಬಸ್ ನಿಲ್ದಾಣದ ಉದ್ಘಾಟನಾ ಸಮಾರಂಭದಲ್ಲಿ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಭಾಗವಹಿಸಿದರು. ಈ ಸಮಾರಂಭದಲ್ಲಿ ಸಚಿವರಾದ ಶ್ರೀ ಉಮೇಶ ಕತ್ತಿ ಜಿ, ಶ್ರೀ ಬಿ. ಶ್ರೀರಾಮಲು ಜಿ, ಶ್ರೀ ಭೈರತಿ ಬಸವರಾಜ ಜಿ, ವಿಧಾನ ಪರಿಷತ ಮುಖ್ಯ ಸಚೇತಕರಾದ ಶ್ರೀ ಮಹಾಂತೇಶ ಕವಟಗಿಮಠ ಜಿ, ಸದಸ್ಯರಾದ ಶ್ರೀ ಹನುಮಂತ ನಿರಾಣಿ ಜಿ, ಶಾಸಕರಾದ ಶ್ರೀ ದುರ್ಯೋಧನ ಐಹೋಳೆ ಜಿ, ಡಿ.ಸಿ.ಸಿ.ಅಧ್ಯಕ್ಷರಾದ ಶ್ರೀ ರಮೇಶ ಕತ್ತಿ ಜಿ ಹಾಗೂ ಇನ್ನಿತರೆ ಪ್ರಮುಖರು ಉಪಸ್ಥಿತರಿದ್ದರು. ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ

Leave a Reply

Your email address will not be published. Required fields are marked *