ಜನರ ಸಮಸ್ಯೆಗಳಿಗೆ ಸ್ಪಂದಿಸುವುದು ನಮ್ಮ ಕರ್ತವ್ಯ….

Spread the love

ಜನರ ಸಮಸ್ಯೆಗಳಿಗೆ ಸ್ಪಂದಿಸುವುದು ನಮ್ಮ ಕರ್ತವ್ಯ….

ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯ ಯಮಕನಮರಡಿ ಮತಕ್ಷೇತ್ರದ ಕುರಣಿವಾಡಿ ಗ್ರಾಮದಲ್ಲಿ, ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಜನಸಂಪರ್ಕ ಸಭೆ ನಡೆಸಿ, ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿದರು. ಬಳಿಕ ಜನರ ಸಮಸ್ಯೆಗಳನ್ನು ಆಲಿಸಿ, ಅಹವಾಲು ಸ್ವೀಕರಿಸಿ, ಅವರ ಮನವಿಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಿದರು. ಜನರ ಸಂಕಷ್ಟಗಳನ್ನು ಅರಿತಿದ್ದು, ಹಂತಹಂತವಾಗಿ ಪರಿಹಾರ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಚಿಕ್ಕೋಡಿ ಜಿಲ್ಲಾ ಅಧ್ಯಕ್ಷರಾದ ಶ್ರೀ ರಾಜೇಶ ನೆರ್ಲಿ ಜಿ, ಯುವ ಮುಖಂಡರಾದ ಶ್ರೀ ಮಾರುತಿ ಅಷ್ಟಗಿ, ಶ್ರೀ ರವಿ ಹಂಜಿ, ಮಂಡಲ ಅಧ್ಯಕ್ಷ ಶ್ರೀ ಶ್ರೀಶೈಲ ಯಮಕನಮರಡಿ,  ಶ್ರೀ ಬಸವರಾಜ ಹುಂದ್ರಿ, ಸ್ಥಳೀಯ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ವರದಿ – ಮಹೇಶ ಶರ್ಮಾ

Leave a Reply

Your email address will not be published. Required fields are marked *