“ದೇಶದ ಹಿತಕ್ಕಾಗಿ ಮಹೋನ್ನತ ಕೊಡುಗೆ ನೀಡಿದ ಮಹಾತ್ಮರ ತ್ಯಾಗ ಬಲಿದಾನವನ್ನು ಸ್ಮರಿಸೋಣ”

Spread the love

 “ದೇಶದ ಹಿತಕ್ಕಾಗಿ ಮಹೋನ್ನತ ಕೊಡುಗೆ ನೀಡಿದ ಮಹಾತ್ಮರ ತ್ಯಾಗ ಬಲಿದಾನವನ್ನು ಸ್ಮರಿಸೋಣ”

ಇಂದು ಚಿಕ್ಕೋಡಿಯ ನ್ಯಾಯವಾದಿಗಳ ಸಂಘದ ಆವರಣದಲ್ಲಿ, ತಾಲ್ಲೂಕು ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ ಹಾಗೂ ತಾಲ್ಲೂಕಿನ ಎಲ್ಲ‌ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾದ 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಗಾಂಧೀ ಜಯಂತಿ ಹಾಗೂ ವಿಶೇಷ ಬೃಹತ್ ಕಾನೂನು ಅರಿವು-ನೆರವು ಅಭಿಯಾನದಲ್ಲಿ ಮುಜರಾಯಿ, ಹಜ ಮತ್ತು ವಕ್ಫ್ ಇಲಾಖೆಯ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ ಹಾಗೂ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಭಾಗವಹಿಸಿ, ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಗೌರವ ಸಮರ್ಪಿಸಿದರು, ಬಳಿಕ ವಿಶೇಷ ಜಾಥಾಗೆ ಹಸಿರು ಬಾವುಟ ತೋರಿಸುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ವಕೀಲ ಪರಿಷತ್ ಉಪಾಧ್ಯಕ್ಷರಾದ ಶ್ರೀ ಕಲ್ಮೇಶ್ವರ ಕಿವಡ, ಹಿರಿಯ ನ್ಯಾಯಾಧೀಶರಾದ ಶ್ರೀ ಶ್ರೀಕಾಂತ ಟಿ, ಶ್ರೀ ವಿಜಯಕುಮಾರ ಬಾಗಡೆ, ಶ್ರೀ ಅಶೋಕ ಆರ್.ಎಚ್. ಚಿಕ್ಕೋಡಿ ನ್ಯಾಯವಾದಿಗಳ ಸಂಘದ ಅಧ್ಯಕ್ಷರಾದ ಶ್ರೀ ನಾಗೇಶ ಕಿವಡ, ತಹಶೀಲ್ದಾರರಾದ ಶ್ರೀ ಎನ್.ಬಿ.ಗೆಜ್ಜಿ, ವಕೀಲರು ಉಪಸ್ಥಿತರಿದ್ದರು.

ವರದಿ : ಮಹೇಶ ಶರ್ಮಾ

Leave a Reply

Your email address will not be published. Required fields are marked *