ಸಿಂಧಗಿ “ಅಭಿವೃದ್ಧಿಗಾಗಿ ಬಿಜೆಪಿ ಅಭ್ಯರ್ಥಿಗೆ ಮತ ನೀಡಿ, ಪಕ್ಷದ ಗೆಲುವಿಗೆ ಕೈಜೋಡಿಸಿ”

Spread the love

ಸಿಂಧಗಿಅಭಿವೃದ್ಧಿಗಾಗಿ ಬಿಜೆಪಿ ಅಭ್ಯರ್ಥಿಗೆ ಮತ ನೀಡಿ, ಪಕ್ಷದ ಗೆಲುವಿಗೆ ಕೈಜೋಡಿಸಿ

ವಿಜಯಪುರದ ಸಿಂಧಗಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ನಿಮಿತ್ತವಾಗಿ ಬಿಜೆಪಿ ಪಕ್ಷದ ಅಭ್ಯರ್ಥಿಯಾದ ಶ್ರೀ ರಮೇಶ ಭೂಸನೂರ ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ವಿಜಯಪುರ ಜಿಲ್ಲೆಯ ಉಸ್ತುವಾರಿ ಹಾಗೂ ಮುಜರಾಯಿ, ಹಜ ಮತ್ತು ವಕ್ಫ್ ಇಲಾಖೆಯ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ ಯವರು ಭಾಗವಹಿಸಿದರು. ನಮ್ಮ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜನಪರ ಯೋಜನೆಗಳು ಮನೆ-ಮನ ತಲುಪುತ್ತಿವೆ. ಹೀಗಾಗಿ ಅಭಿವೃದ್ಧಿ ಹಾಗೂ ಜನಸ್ನೇಹಿ ಕಾರ್ಯಗಳಿಗಾಗಿ ಮತದಾರ ಬಾಂಧವರು ಬಿಜೆಪಿ ಪಕ್ಷವನ್ನು ಬೆಂಬಲಿಸುತ್ತಿದ್ದಾರೆ. ಈ ಬಾರಿಯ ಉಪ ಚುನಾವಣೆಯಲ್ಲೂ ಬಿಜೆಪಿ ಪಕ್ಷದ ಅಭ್ಯರ್ಥಿಗೆ ಮತದಾರರು ಆಶೀರ್ವದಿಸಿ, ಪಕ್ಷದ ಗೆಲುವಿಗೆ ಕೈಜೋಡಿಸಲಿದ್ದಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಸಚಿವರಾದ ಶ್ರೀ ಕೆ.ಎಸ್. ಈಶ್ವರಪ್ಪ ಜಿ, ಶ್ರೀ ಗೋವಿಂದ ಕಾರಜೋಳ ಜಿ, ಶ್ರೀ ಸೋಮಣ್ಣ ಜಿ ಉಪಸ್ಥಿತರಿದ್ದರು.

ವರದಿ – ಮಹೇಶ ಶರ್ಮಾ

Leave a Reply

Your email address will not be published. Required fields are marked *