“ಸಿಂದಗಿಯಲ್ಲಿ ಬಿಜೆಪಿ ಗೆಲುವು ಸಾಧಿಸುವ ವಿಶ್ವಾಸವಿದೆ”

Spread the love

ಸಿಂದಗಿಯಲ್ಲಿ ಬಿಜೆಪಿ ಗೆಲುವು ಸಾಧಿಸುವ ವಿಶ್ವಾಸವಿದೆ

ಸಿಂದಗಿ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಹಿನ್ನೆಲೆ, ಇಂದು ಆಲಮೇಲದಲ್ಲಿ, ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಜಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್ ಜಿ ಅವರ ನೇತೃತ್ವದಲ್ಲಿ, ನಮ್ಮ ಪಕ್ಷದ ಅಭ್ಯರ್ಥಿ ಶ್ರೀ ರಮೇಶ್ ಭೂಸನೂರ ಅವರ ಪರ ಪ್ರಚಾರಾರ್ಥವಾಗಿ ನಡೆದ ಬೃಹತ್ ಸಮಾವೇಶದಲ್ಲಿ ಮಾಜಿ ಉಪಮುಖ್ಯಮಂತ್ರಿಗಳಾದ ಶ್ರೀ ಲಕ್ಷ್ಮಣ ಸವದಿ ಜೀ ಭಾಗವಹಿಸಿ, ಮತದಾರ ಬಾಂಧವರನ್ನು ಉದ್ದೇಶಿಸಿ ಮಾತನಾಡಿದರು. ನಮ್ಮ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜನಪರ ಕಾರ್ಯಗಳು ಜನರ ಮನೆ-ಮನ ತಲುಪಿದೆ. ಹೀಗಾಗಿ ಈ ಉಪಚುನಾವಣೆಯಲ್ಲಿ ಮತದಾರ ಬಾಂಧವರು ನಮ್ಮ ಪಕ್ಷದ ವಿಜಯದ ಬಾವುಟ ಹಾರಿಸಲಿದ್ದಾರೆ ಎಂಬ ನಂಬಿಕೆಯಿದೆ.  ಈ ಸಂದರ್ಭದಲ್ಲಿ ಸಚಿವರಾದ ಶ್ರೀ ಗೋವಿಂದ ಕಾರಜೋಳ, ಶ್ರೀ ವಿ. ಸೋಮಣ್ಣ, ಶ್ರೀ ಪ್ರಭು ಚವ್ಹಾಣ, ಶ್ರೀ ಸಿ.ಸಿ  ಪಾಟೀಲ, ಶ್ರೀ ಹಾಲಪ್ಪ ಆಚಾರ್,  ಸಂಸದರಾದ ಶ್ರೀ ರಮೇಶ್ ಜಿಗಜಿಣಗಿ, ಶಾಸಕರಾದ ಶ್ರೀ ಬಸನಗೌಡ ಪಾಟೀಲ್ ಯತ್ನಾಳ್, ಶ್ರೀ ಎ.ಎಸ್.ಪಾಟೀಲ್ ನಡಹಳ್ಳಿ, ಶ್ರೀ ದತ್ತಾತ್ರೇಯ ಪಾಟೀಲ್ ರೇವೂರ್, ಶ್ರೀ ಬಸವರಾಜ್ ಮತ್ತಿಮೂಡ, ಇತರೆ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ – ಮಹೇಶ ಶರ್ಮಾ

Leave a Reply

Your email address will not be published. Required fields are marked *