ಜನಹಿತ ಕಾರ್ಯಗಳಿಗಾಗಿ ಬಿಜೆಪಿಗೆ ಮತ ನೀಡಿ, ಬೆಂಬಲಿಸಿ….

Spread the love

ಜನಹಿತ ಕಾರ್ಯಗಳಿಗಾಗಿ ಬಿಜೆಪಿಗೆ ಮತ ನೀಡಿ, ಬೆಂಬಲಿಸಿ….

ಸಿಂದಗಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆ, ಬಿಜೆಪಿ ಪಕ್ಷದ ಅಭ್ಯರ್ಥಿ ಶ್ರೀ ರಮೇಶ ಭೂಸನೂರ ಅವರ ಪರ ಪ್ರಚಾರಾರ್ಥವಾಗಿ ನಡೆದ ತಳವಾರ ಸಮಾಜದ ಸಮಾವೇಶದಲ್ಲಿ ವಿಜಯಪುರ ಜಿಲ್ಲೆಯ ಉಸ್ತುವಾರಿ ಹಾಗೂ ಮುಜರಾಯಿ, ಹಜ ಮತ್ತು ವಕ್ಫ್ ಇಲಾಖೆಯ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ ಯವರು ಭಾಗವಹಿಸಿ, ಕ್ಷೇತ್ರದ ಸರ್ವಾಂಗೀಣ ಪ್ರಗತಿಗಾಗಿ ಬಿಜೆಪಿ ಬೆಂಬಲಿಸಿ, ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿ ಎಂದು ಮತಯಾಚಿಸಿದರು.  ಈ ಸಂದರ್ಭದಲ್ಲಿ ಸಚಿವರಾದ ಶ್ರೀ ಗೋವಿಂದ ಕಾರಜೋಳ ಜಿ, ಶ್ರೀ ಸಿ.ಸಿ. ಪಾಟೀಲ ಜಿ, ಶ್ರೀ ಕೋಟಾ ಶ್ರೀನಿವಾಸ ಪೂಜಾರಿ ಜಿ, ಸಂಸದರಾದ ಶ್ರೀ ರಮೇಶ್ ಜಿಗಜಿಣಗಿ ಜಿ, ಮಾಜಿ ಉಪಮುಖ್ಯಮಂತ್ರಿಗಳಾದ ಶ್ರೀ ಲಕ್ಷ್ಮಣ ಸವದಿ ಜಿ, ಮಾಜಿ ಸಚಿವರಾದ ಶ್ರೀ ಬಾಬುರಾವ ಚಿಂಚನಸೂರ ಜಿ, ಶ್ರೀ ಅಪ್ಪು ಪಟ್ಟಣಶೆಟ್ಟಿ ಜಿ, ಶಾಸಕರಾದ ಶ್ರೀ ಬಸನಗೌಡ ಪಾಟೀಲ್ ಯತ್ನಾಳ್ ಜಿ, ಶ್ರೀ ದೊಡ್ಡನಗೌಡ ಪಾಟೀಲ್ ಜಿ, ಶ್ರೀ ಶರಣು ಸಲಗಾರ ಜಿ, ಬಿಜೆಪಿ ಬೆಳಗಾವಿ ಗ್ರಾಮೀಣ ಜಿಲ್ಲಾಧ್ಯಕ್ಷರಾದ ಶ್ರೀ ಸಂಜಯ್ ಪಾಟೀಲ,ಮಾಜಿ ಶಾಸಕರು, ಸ್ಥಳೀಯ ಮುಖಂಡರು, ತಳವಾರ ಸಮಾಜದ ಬಾಂಧವರು ಪಾಲ್ಗೊಂಡಿದ್ದರು…

ವರದಿ – ಮಹೇಶ ಶರ್ಮಾ

Leave a Reply

Your email address will not be published. Required fields are marked *