ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಹೃದಯಾಘಾತವಾಗಿದ್ದು, ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದಾರೆ.

Spread the love

ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಹೃದಯಾಘಾತವಾಗಿದ್ದು, ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಜಿಮ್ ಮಾಡುವ ಸಂದರ್ಭದಲ್ಲಿ ಎದೆ ನೋವು ಕಾಣಿಸಿಕೊಂಡಿತ್ತು ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಪುನೀತ್ ಅವರನ್ನು ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ. ಸದ್ಯ ವಿಕ್ರಂ ಆಸ್ಪತ್ರೆಯ ಪ್ರಮುಖ ವೈದ್ಯರು ಪುನೀತ್ ರಾಜ್‌ಕುಮಾರ್ ಮೇಲೆ ನಿಗಾ ವಹಿಸಿದ್ದಾರೆ. ಇಂದು ಭಜರಂಗಿ 2 ಚಿತ್ರವನ್ನು ವಿಕ್ಷಿಸುತ್ತಿದ್ದ ರಾಜ್ ಪ್ಯಾಮಿಲಿ ಪುನೀತ್ ರಾಜ್‌ಕುಮಾರ್ ವಿಷಯ ತಿಳಿದ ಮೇಲೆ ಎಲ್ಲಾರು ಆಸ್ತತ್ರೆಗೆ ತೆರಳುತ್ತಿದ್ದಾರೆ. ಸದ್ಯದ ಮಾಹಿತಿ ಪ್ರಕಾರ ಪುನೀತ್ ರಾಜ್ ಕುಮಾರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ , ಇನ್ನೂ ಇನ್ನು ಕೆಲವೆ ಗಂಟೆಗಳಲ್ಲಿ  ಪುನೀತ್ ರಾಜಕುಮಾರ್ ಕುರಿತು ವಿಕ್ರಂ ಆಸ್ಪತ್ರೆಯ ವೈದ್ಯರು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಿದೆ ಎಂಬ ಮಾಹಿತಿ ಲಭ್ಯವಾಗಿದೆ… ವಿಕ್ರಂ ಆಸ್ಪತ್ರೆಗೆ ಚಿತ್ರರಂಗದ ಹಿರಿಯ ನಟರು ಕಣ್ಣೀರಿಡುತ್ತಲೆ ಆಸ್ಪತ್ರೆಗೆ ಆಗಮಿಸಿದ್ದಾರೆ , ಸ್ಥಳದಲ್ಲಿ ಅಭಿಮಾನಿಗಳು ಜಮಾವಣೆಯಾಗಿದ್ದು ಸ್ಥಳಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಸಚಿವ ವಿ.ಸೋಮಣ್ಣ ಸೇರಿದಂತೆ ಅನೇಕರು ಭೇಟಿ ನೀಡಿದ್ದಾರೆ… ಈ ಸುದ್ದಿ ಅವರ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. ಶೀಘ್ರವಾಗಿ ಅಪ್ಪು ಅವರ ಆರೋಗ್ಯ ಸುಧಾರಿಸಲಿ ಎಂದು ಅಭಿಮಾನಿಗಳು ಆಸ್ಪತ್ರೆಯ ಮುಂದೆ ಬೇಡಿಕೊಳ್ಳುತ್ತಿದ್ದಾರೆ.

ವರದಿ – ಹುಸೇನ್ ಮೋತೆಖಾನ್

Leave a Reply

Your email address will not be published. Required fields are marked *