ಸವದತ್ತಿಗೆ ಭೇಟಿ ನೀಡಿ, ಯಲ್ಲಮ್ಮನ ದರ್ಶನ ಪಡೆದ ಸಿಎಂ ಬೊಮ್ಮಾಯಿ-

Spread the love

ಸವದತ್ತಿಗೆ ಭೇಟಿ ನೀಡಿ, ಯಲ್ಲಮ್ಮನ ದರ್ಶನ ಪಡೆದ ಸಿಎಂ ಬೊಮ್ಮಾಯಿ

ಬೆಳಗಾವಿ: ದೀಪಾವಳಿ ಹಬ್ಬದ ಪ್ರಯುಕ್ತ ಮುಖ್ಯಮಂತ್ರಿ ಬಸವರಾಜ್  ಬೊಮ್ಮಾಯಿ ಇಂದು ಸವದತ್ತಿಗೆ ಭೇಟಿ ನೀಡಿ ಕ್ಷೇತ್ರಾಧಿದೇವತೆ ಯಲ್ಲಮ್ಮ ದೇವಿದ ದರ್ಶನ ಪಡೆದರು. ಬೊಮ್ಮಾಯಿ ಅವರು ಹುಬ್ಬಳ್ಳಿ, ಧಾರವಾಡ, ಅಮ್ಮಿನಭಾವಿ ಮಾರ್ಗವಾಗಿ ಬೆಳಗಾವಿ ಜಿಲ್ಲೆಯ ಸವದತ್ತಿಯ ಯಲ್ಲಮ್ಮನ ಗುಡ್ಡಕ್ಕೆ ಆಗಮಿಸಿ ಕ್ಷೇತ್ರಾಧಿದೇವತೆ ಏಳುಕೊಳ್ಳದ ಯಲ್ಲಮ್ಮನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.ಈ ವೇಳೆ ಮುಖ್ಯಮಂತ್ರಿಗಳಿಗೆ ವಿಧಾನಸಭೆ ಉಪಸಭಾಪತಿ ಹಾಗೂ ಸವದತ್ತಿ ಶಾಸಕರಾದ ಆನಂದ ಮಾಮನಿಯವರ ಮನೆಗೆ ಬೇಟಿ ನೀಡಿದರು.ಈ ವೇಳೆ ರೈತ ಸಂಘದಿಂದ ಹಾಗೂ ಶಿಕ್ಷಕರ ಸಂಘದಿಂದ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಎಂ. ಜಿ. ಹಿರೇಮಠ, ಬೈಲಹೊಂಗಲ ಉಪವಿಭಾಗಾಧಿಕಾರಿ ಶಶಿಧರ ಬಗಲಿ, ಆಯ್ ಜಿ ‌ಸತೀಶಕುಮಾರ, ಎಸ್ ಪಿ ಲಕ್ಷ್ಮಣ ನಿಂಬರಗಿ, ಸವದತ್ತಿ ತಹಶೀಲ್ದಾರ ಪ್ರಶಾಂತ ಪಾಟೀಲ, ಡಿವೈಎಸ್ಪಿ ರಾಮನಗೌಡ ಹಟ್ಟಿ, ಸಿಪಿಐ ಮಂಜುನಾಥ ನಡುವಿನಮನಿ, ಮುರಗೋಡ ಪಿಎಸ್ಐ ಪ್ರವೀಣ ಗಂಗೋಳ್ಳಿ, ಯಲ್ಲಮ್ಮ ದೇವಸ್ಥಾನದ ಆಡಳಿತ ಅಧ್ಯಕ್ಷರಾದ ಬಸಯ್ಯ ಹಿರೇಮಠ, ಈರಣ್ಣಾ ಚಂದರಗಿ, ರಮೇಶ ಗೋಮಾಡಿ, ಯಲ್ಲಪ್ಪ ಕಾಳಪ್ಪನವರ, ಬಸಪ್ಪ ಸಿದ್ದಕ್ಕನವರ, ಚಂದ್ರಶೇಖರ ಅಳಗೋಡಿ, ಪುಂಡಲೀಕ ಮೇಟಿ, ಸುರೇಶ ಬಂಟನೂರ, ತಾಲೂಕಾ ಆಡಳಿತದ ಅಧಿಕಾರಿಗಳು, ಯಲ್ಲಮ್ಮ ದೇವಸ್ಥಾನದ ಆಡಳಿತ ಮಂಡಳಿ ಸರ್ವ ಸದಸ್ಯರು, ಭಾಜಪ ಕಾರ್ಯಕರ್ತರು ಸೇರಿದಂತೆ ಅನೇಕ ಉಪಸ್ಥಿತರಿದ್ದರು.

ವರದಿ – ಮಹೇಶ ಶರ್ಮಾ

Leave a Reply

Your email address will not be published. Required fields are marked *