“ಸಿಂದಗಿ ಉಪಚುನಾವಣೆ ವಿಜಯ ನಮ್ಮೆಲ್ಲರ ಒಗ್ಗಟ್ಟಿನ ಶ್ರಮಕ್ಕೆ ಸಂದ ಪ್ರತಿಫಲ”

Spread the love

ಸಿಂದಗಿ ಉಪಚುನಾವಣೆ ವಿಜಯ ನಮ್ಮೆಲ್ಲರ ಒಗ್ಗಟ್ಟಿನ ಶ್ರಮಕ್ಕೆ ಸಂದ ಪ್ರತಿಫಲ

ಸಿಂದಗಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಶ್ರೀ ರಮೇಶ ಭೂಸನೂರ ಅವರು ಅಭೂತಪೂರ್ವ ಗೆಲುವು ಸಾಧಿಸಿದ ಸಲುವಾಗಿ, ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ವಿಜಯಪುರ ಜಿಲ್ಲೆಯ ಉಸ್ತುವಾರಿ ಹಾಗೂ ಮುಜರಾಯಿ, ಹಜ ಮತ್ತು ವಕ್ಫ್ ಇಲಾಖೆಯ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ ಯವರು ನೂತನ ಶಾಸಕರಿಗೆ ಹೂಗುಚ್ಛ ನೀಡಿ ಅಭಿನಂದನೆ ಸಲ್ಲಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಬಿಜೆಪಿ ಪಕ್ಷದ ಮೇಲೆ ವಿಶ್ವಾಸವನ್ನಿಟ್ಟು ಬಿಜೆಪಿ ಗೆಲುವಿಗೆ ಕಾರಣೀಭೂತರಾದ ಮತದಾರ ಬಾಂಧವರು, ನಿರಂತರವಾಗಿ ನಮ್ಮೊಂದಿಗೆ ಪ್ರಚಾರ ಕಾರ್ಯದಲ್ಲಿ ತೊಡಗಿದ ಪಕ್ಷದ ಕಾರ್ಯಕರ್ತರು ಹಾಗೂ ಪಕ್ಷದ ಮುಖಂಡರಿಗೆ ಹೃದಯಪೂರ್ವಕ ಧನ್ಯವಾದಗಳು.  ನಮ್ಮ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜನಪರ ಯೋಜನೆಗಳು ಬಿಜೆಪಿ ಗೆಲುವಿಗೆ ಶ್ರೀರಕ್ಷೆಯಾಗಿದೆ. ಮುಂದೆಯೂ ಕೂಡ ನಿಮ್ಮೆಲ್ಲರ ಹಿತ ಕಾಪಾಡಲು ನಾವು ಸದಾ ಸಿದ್ಧರಿದ್ದು, ನಿಮ್ಮ ಪ್ರೀತಿ, ಆಶೀರ್ವಾದ, ಸಹಕಾರ ಸದಾ ಹೀಗೆ ಇರಲಿ ಎಂದು ಆಶಿಸುತ್ತೇನೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಮಾಜಿ ಉಪ ಮುಖ್ಯಮಂತ್ರಿಗಳಾದ ಶ್ರೀ ಲಕ್ಷ್ಮಣ ಸವದಿ ಜಿ, ಶಾಸಕರು, ಸ್ಥಳೀಯ ಮುಖಂಡರು ಕಾರ್ಯಕರ್ತರು ಪಾಲ್ಗೊಂಡಿದ್ದರು.

ವರದಿ – ಮಹೇಶ ಶರ್ಮಾ

Leave a Reply

Your email address will not be published. Required fields are marked *