ನಗದು,ಚಿನ್ನಾಭರಣ ದೋಚಿ,ಅತ್ಯಾಚಾರಕ್ಕೆ ಯತ್ನಿಸಿದ್ದ ದರೋಡೆಕೋರರ ಬಂಧನ-

Spread the love

ನಗದು,ಚಿನ್ನಾಭರಣ ದೋಚಿ,ಅತ್ಯಾಚಾರಕ್ಕೆ ಯತ್ನಿಸಿದ್ದ ದರೋಡೆಕೋರರ ಬಂಧನ

ಕಾರ್ಪೆಂಟರಿ ಕೆಲಸ ಮಾಡುವ ವ್ಯಕ್ತಿಯೊಬ್ಬರ ಮನೆಗೆ ನುಗ್ಗಿದ ನಾಲ್ವರು ದರೋಡೆಕೊರರು ಚಾಕು ಮತ್ತು ಕಬ್ಬಿಣದ ರಾಡ್ ತೋರಿಸಿ ಅವರನ್ನು ಹೆದರಿಸಿ 10 ಸಾವಿರ ನಗದು ಹಣ ಮತ್ತು ಚಿನ್ನಾಭರಣ ದೋಚಿ ಪರಾರಿಯಾಗಿದ್ದರು. ಬೆಂಗಳೂರು ಗ್ರಾಮಾಂತರ ಜಿಲ್ಲೆ  ದೊಡ್ಡಬಳ್ಳಾಪುರ: ಬೆಳಗ್ಗೆ ಮನೆಯ ಬಾಗಿಲು ಒಡೆದು ಮನೆಯೊಳಗೆ ನುಗ್ಗಿದ ದರೋಡೆಕೋರರು, ಚಿನ್ನಾಭರಣ ದರೋಡೆ ಜೊತೆಗೆ ಹೆಣ್ಣು ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಗಳನ್ನು ರಾಜಾನುಕುಂಟೆ ಪೊಲೀಸರು ಬಂಧಿಸಿದ್ದಾರೆ. ಯಲಹಂಕ ತಾಲೂಕಿನ ಅದ್ದಿಗಾನಹಳ್ಳಿಯಲ್ಲಿ 08-04-2021ರ ಬೆಳಗಿನ ಜಾವ ಘಟನೆ ನಡೆದಿತ್ತು. ಕಾರ್ಪೆಂಟರಿ ಕೆಲಸ ಮಾಡುವ ವ್ಯಕ್ತಿಯೊಬ್ಬರ ಮನೆಗೆ ನುಗ್ಗಿದ ನಾಲ್ವರು ದರೋಡೆಕೊರರು ಚಾಕು ಮತ್ತು ಕಬ್ಬಿಣದ ರಾಡ್ ತೋರಿಸಿ ಅವರನ್ನು ಹೆದರಿಸಿ 10 ಸಾವಿರ ನಗದು ಹಣ ಮತ್ತು ಚಿನ್ನಾಭರಣ ದೋಚಿ ಪರಾರಿಯಾಗಿದ್ದರು. ಅಷ್ಟೇ ಅಲ್ಲದೆ, ಮನೆಯಲ್ಲಿದ್ದ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರಕ್ಕೆ ಯತ್ನ ನಡೆಸಿದ್ದಾರೆ. ಆ ವೇಳೆ ಅವರು ಕೂಗಿಕೊಂಡಾಗ ಹೆದರಿ ಅಲ್ಲಿಂದ ಪರಾರಿಯಾಗಿದ್ದರು. ಘಟನೆ ಸಂಬಂಧ ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈಗ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ಬಂಧಿತರಿಂದ 7 ಲಕ್ಷ ಮೌಲ್ಯದ 151 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದುಕೊಂಡಿದ್ದಾರೆ. ಮತ್ತಿಬ್ಬರ ಪತ್ತೆಗಾಗಿ ಶೋಧಕಾರ್ಯ ಮುಂದುವರೆಸಿರುವುದಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪೋಲಿಸ್ ಆಧೀಕ್ಷಕರಾದ  ವಂಶಿ ಕೃಷ್ಣ ತಿಳಿಸಿದ್ದಾರೆ. – ✍️ವಂದೇ ಮಾತರಂ-9008927428

Leave a Reply

Your email address will not be published. Required fields are marked *