ಅಲ್ಲಾಪೂರ ಗ್ರಾಮಕ್ಕೆ ಭೇಟಿ ನೀಡಿದ ಧಾರವಾಡ ಜಿಲ್ಲಾ ಪಂಚಾಯತ ಕಾರ್ಯದರ್ಶಿ ರೇಖಾ ಡೊಳ್ಳಿನ….

Spread the love

ಅಲ್ಲಾಪೂರ ಗ್ರಾಮಕ್ಕೆ ಭೇಟಿ ನೀಡಿದ ಧಾರವಾಡ ಜಿಲ್ಲಾ ಪಂಚಾಯತ ಕಾರ್ಯದರ್ಶಿ ರೇಖಾ ಡೊಳ್ಳಿನ….

ಕುಂದಗೋಳ:- ತಾಲೂಕಿನ ಅಲ್ಲಾಪೂರ ಗ್ರಾಮಕ್ಕೆ ಧಾರವಾಡ ಜಿಲ್ಲಾ ಪಂಚಾಯತನ ಉಪ ಕಾರ್ಯದರ್ಶಿಗಳಾದ ಶ್ರೀಮತಿ ರೇಖಾ ಡೊಳ್ಳಿನ ಭೇಟಿ ನೀಡಿ ಕಾಮಗಾರಿ ವೀಕ್ಷಣೆ‌ ಮಾಡಿದರು. ಅಲ್ಲಾಪೂರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಗ್ರಾಮದ ಕೆರೆ ಹೂಳೆತ್ತುವುದು ಮತ್ತು ಸ್ವಚ್ಚಗೊಳಿಸುವಿಕೆ ಕಾರ್ಯದ ಬಗ್ಗೆ ಮರುಪರಿಶೀಲನೆ ಮತ್ತು ಮುಂಬರುವ ದಿನಗಳಲ್ಲಿ ಅಲ್ಲಾಪುರ ಗ್ರಾಮದ ಕೆರೆಯ ಸಮಗ್ರ ಅಭಿವೃದ್ಧಿ ಮಾಡುವ ಭರವಸೆಯೊಂದಿಗೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮಹೇಶ್ ಕುರಿ ಅವರಿಗೆ ಸೂಚನೆಯನ್ನು ನೀಡಿದರು. ಅಷ್ಟೇಯಲ್ಲ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮತ್ತು ಜಾನುವಾರ ಕುಡಿಯುವ ನೀರಿನ ತೊಟ್ಟಿ ಜೀವಜಲ ಹಾಗೂ ಶುದ್ಧ ಕುಡಿಯುವ ನೀರಿನ ಘಟಕ ವೀಕ್ಷಣೆಗಳ ಮೂಲಕ ಅಭಿವೃದ್ಧಿ ಪಥದಲ್ಲಿ ಸಾಗುತ್ತಿರುವ ಅಲ್ಲಾಪೂರ ಗ್ರಾಮದ ಭವಿಷ್ಯದ ಬಗ್ಗೆ ಹಾಗೂ ಗ್ರಾಮ ಪಂಚಾಯತ್ ಸದಸ್ಯರಾದ ಮಲ್ಲಿಕಾರ್ಜುನ ‌ರಡ್ಡೇರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಎರೆಹುಳು ತೊಟ್ಟಿ, ಅಂಗನವಾಡಿ ಕೇಂದ್ರದಲ್ಲಿ ಚಿಕ್ಕ ಮಕ್ಕಳ ಅಳವಡಿಸಿದ ಆಟಿಕೆ ಸಾಮಾನುಗಳು, ಗೋಡೆ ಬರಹಗಳ ಮತ್ತು ಮುಂಬರುವ ಕಾಮಗಾರಿಗಳ ಬಗ್ಗೆ ಮರು ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮಹೇಶ್ ಕುರಿ ಹಾಗೂ ಸಹಾಯಕ ನಿರ್ದೇಶಕರಾದ ಅಜಯ್ ಹಾಗೂ ತಾಂತ್ರಿಕ ಸಹಾಯಕರಾದ ಶಿವಕುಮಾರ್ ಹಂಚಿನಮನಿ ಹಾಗೂ ತಾಂತ್ರಿಕ ಸಂಯೋಜಕರಾದ ಶಿವಾನಂದ ಚಿಂತಕಲ ಗ್ರಾಮ ಪಂಚಾಯತ್ ಸದಸ್ಯರಾದ ಮಲ್ಲಿಕಾರ್ಜುನ ‌ರಡ್ಡೇರ ಉಪಸ್ಥಿತರಿದ್ದರು.

ವರದಿ – ಮಹೇಶ ಶರ್ಮಾ

Leave a Reply

Your email address will not be published. Required fields are marked *