ಸಿಜಿಸಿ ಮೋಹನ್ ಕುಮಾರ್ ದಾನಪ್ಪನವರಿಗೆ “ಕಾನೂನು ಸೇವಕ ರಾಜ್ಯ ಪ್ರಶಸ್ತಿ” ಪ್ರಧಾನ!

Spread the love

ಸಿಜಿಸಿ ಮೋಹನ್ ಕುಮಾರ್ ದಾನಪ್ಪನವರಿಗೆಕಾನೂನು ಸೇವಕ ರಾಜ್ಯ ಪ್ರಶಸ್ತಿಪ್ರಧಾನ!

ಬೆಂಗಳೂರು ನ:14 ರಂದು ಕನ್ನಡ ಭವನ ನಯನ ಸಭಾಂಗಣದಲ್ಲಿ  ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನ (ರೀ)ರವರು ಹಮ್ಮಿಕೊಂಡ 66ನೇ ಕನ್ನಡ ರಾಜ್ಯೋತ್ಸವ ಆಚರಣೆ ಮತ್ತು ವಿವಿಧ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಬಳ್ಳಾರಿ ಜಿಲ್ಲೆ ಕಂಪ್ಲಿಯ ನಿವಾಸಿ ಸಾಮಾಜಿಕ ಹೋರಾಟಗಾರ ಹಾಗೂ ಕರ್ನಾಟಕ ಉಚ್ಚ ನ್ಯಾಯಾಲಯದ ಕೇಂದ್ರ ಸರ್ಕಾರಿ ವಕೀಲರಾದ ಮೋಹನ್ ಕುಮಾರ್ ದಾನಪ್ಪನವರಿಗೆ ಅವರ ಸಾಮಾಜಿಕ ರಂಗದ ಅನುಪಮ ಸೇವೆಯನ್ನ ಗುರುತಿಸಿ “ಕಾನೂನು ಸೇವಕ ರಾಜ್ಯ ಪ್ರಶಸ್ತಿ”ನ್ನು ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಬೆಂಗಳೂರಿನ ಕೊಳದ ಮತ ಮಹಾಸಂಸ್ಥಾನದ ಪೀಠಾಧಿಪತಿಗಳಾದ ಶ್ರೀ ಶಾಂತವೀರ ಮಹಾ ಸ್ವಾಮೀಜಿರವರು,ಮಾಜಿ ಸಚಿವರಾದ ರಾಮಚಂದ್ರ ಗೌಡ, ಸಾರ್ವಜನಿಕ ಗ್ರಂಥಾಲಯದ ನಿರ್ದೇಶಕರಾದ ಸತೀಶ್ ಕುಮಾರ್ ಎಸ್ ಹೊಸಮನಿ, ಪರಿಸರವಾದಿ ಹಾಗೂ ನಿವೃತ್ತ ಐಎಫ್ ಎಸ್ ಅಧಿಕಾರಿ ಕೆ.ವಿ.ಲಕ್ಷ್ಮಣ್ ಮೂರ್ತಿ, ಸಾದ್ವಿ ಯೋಗಿನಿ ಮಾತಾ, ಕರ್ನಾಟಕ ಕೃಷಿ ಕೈಗಾರಿಕಾ ನಿಗಮದ ಮಾಜಿ ನಿರ್ದೇಶಕರಾದ  ಡಾ. ಪದ್ಮನಾಭ ಶ್ರೇಷ್ಠಿ, ಸದ್ರಿ ಪ್ರತಿಷ್ಠಾನದ ಅಧ್ಯಕ್ಷರಾದ ಚಲನಚಿತ್ರ ನಟ ನಿರ್ದೇಶಕ ಸಾಹಿತಿ ಡಾ.ಗುಣವಂತ ಮಂಜು, ಲಾಡ ಮುಗಳಿ ವಿರೂಪಾಕ್ಷೇಶ್ವರ ಮಠದ ಮ.ನೀ.ಪ್ರ.ಅಭಿನವ ಬಸವಲಿಂಗ ಮಹಾಸ್ವಾಮೀಜಿ, ಕನ್ನಡಪರ ಹೋರಾಟಗಾರ ಗೋವಿಂದೇ ಹಳ್ಳಿ ಕೃಷ್ಣೇಗೌಡ ಹಾಗೂ ಚಲನಚಿತ್ರ ನಟ ನಟಿರವರು ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಿದರು,

ವರದಿ – ಮಹೇಶ ಶರ್ಮಾ

Leave a Reply

Your email address will not be published. Required fields are marked *