ಗಂಗಾವತಿಯ ಆಮ್ ಆದ್ಮಿ ಪಕ್ಷದ ಕಾರ್ಯಾಲಯದಲ್ಲಿ ಸಂವಿಧಾನ ಸಮರ್ಪಣಾ ದಿನಾಚರಣೆ ಮತ್ತು ಆಮ್ ಆದ್ಮಿ ಪಕ್ಷದ ಸಂಸ್ಥಾಪನ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು….

Spread the love

ಗಂಗಾವತಿಯ ಆಮ್ ಆದ್ಮಿ ಪಕ್ಷದ ಕಾರ್ಯಾಲಯದಲ್ಲಿ ಸಂವಿಧಾನ ಸಮರ್ಪಣಾ ದಿನಾಚರಣೆ ಮತ್ತು ಆಮ್ ಆದ್ಮಿ ಪಕ್ಷದ ಸಂಸ್ಥಾಪನ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು….

ಇಂದು ಗಂಗಾವತಿಯ ಆಮ್ ಆದ್ಮಿ ಪಕ್ಷದ ಕಾರ್ಯಾಲಯದಲ್ಲಿ ಸಂವಿಧಾನ ಸಮರ್ಪಣಾ ದಿನಾಚರಣೆ ಮತ್ತು ಆಮ್ ಆದ್ಮಿ ಪಕ್ಷದ ಸಂಸ್ಥಾಪನ ದಿನಾಚರಣೆಯನ್ನು ಆಚರಿಸಲಾಯಿತು ಪಕ್ಷದ ಜಿಲ್ಲಾಧ್ಯಕ್ಷರಾದ ಹುಸೇನ್ ಸಾಬ್ ಗಂಗನಾಳ ಅವರು ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧ್ಯಕ್ಷರು ಇಂದು ಸಂವಿಧಾನ ಸಮರ್ಪಣಾ ದಿನ ಇಡೀ ದೇಶದ ಜನತೆಗೆ ಸೌಹಾರ್ದ ಸಮಾನತೆ ಸಮರ್ಪಣೆ ಮಾಡಿದ ದಿನ ವಾಗಿದೆ ಅದೇ ರೀತಿ ಭಾರತದ ರಾಜಕೀಯ ಇತಿಹಾಸದಲ್ಲಿ ಒಂದು ಹೊಸ ಇತಿಹಾಸ ಸೃಷ್ಟಿಸಿದ ಆಮ್ ಆದ್ಮಿ ಪಕ್ಷ ಹುಟ್ಟಿದ ದಿನ ಸಾಮಾನ್ಯ ಜನರ ಸಮೂಹವೊಂದು ರಾಜಕೀಯ ಬದಲಾವಣೆ ಗೋಸ್ಕರ ಒಗ್ಗೂಡಿ ಪಕ್ಷವನ್ನು ಸಂಘಟಿಸಿ ಪಕ್ಷವನ್ನು ಪಕ್ಷವನ್ನು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅಧಿಕಾರ ಹಿಡಿಯುವ ಮೂಲಕ ಸಾಂಪ್ರದಾಯಿಕ ರಾಜಕಾರಣವನ್ನ ಮೂಲೆಗುಂಪು ಮಾಡಿ ರಾಜಕಾರಣದ ದಿಕ್ಕನ್ನೇ ಬದಲಿಸುವಂತೆ ಮಾಡಿದ ಆಮ್ ಆದ್ಮಿ ಪಕ್ಷ ಹುಟ್ಟಿದ ದಿನ ಕರ್ನಾಟಕದಲ್ಲಿ ಪಕ್ಷ ಸಂಘಟನೆ ಉತ್ತಮ ಮಟ್ಟದಲ್ಲಿ ನಡೆಯುತ್ತಿದ್ದು ಮುಂದಿನ ದಿನಗಳಲ್ಲಿ ಆಮ್ ಆದ್ಮಿ ಪಕ್ಷ ಉತ್ತಮ ಭವಿಷ್ಯವನ್ನು ಹೊಂದಿದೆ ಕರ್ನಾಟಕದಲ್ಲಿಯೂ ಕೂಡ ದೆಹಲಿ ಮಾದರಿ ಸರ್ಕಾರ ರಚನೆ ಮಾಡುವುದು ನಮ್ಮೆಲ್ಲರ ಆಶಯವಾಗಿದ್ದು ಮತ್ತು ಆ ನಿಟ್ಟಿನಲ್ಲಿ ನಾವು ಇನ್ನಷ್ಟು ಸಂಘಟಿತರಾಗಬೇಕು ಎಂದು ಹೇಳಿದರು ಈ ಸಂದರ್ಭದಲ್ಲಿ ಆಮ್ ಆದ್ಮಿ ಪಕ್ಷದ ಗಂಗಾವತಿ ತಾಲೂಕು ಅಧ್ಯಕ್ಷರಾದ ಶರಣಪ್ಪ ಸಜ್ಜಿ ಹೊಲ ಕೊಪ್ಪಳ, ತಾಲೂಕು ಅಧ್ಯಕ್ಷರಾದ ಮೊಹಮ್ಮದ್ ನಾಸೀರ್, ದೊಡ್ಡಬಸಪ್ಪ ಪೂಜಾರಿ, ಪ್ರಕಾಶ್ ವಕೀಲರು, ಗರೀಬನ್ ನವಾಜ್, ಹಸನ್ ಸಾಬ್ ಮುದುಗಲ್, ದೇವರಾಜ್, ಚಂದ್ರಶೇಖರ್, ನಿಸರ್ಗ, ಚಂದ್ರಶೇಖರ್ ಒಗ್ಗ, ಬಸಮ್ಮ ,ಅಯ್ಯಮ್ಮ ,ಗಣೇಶ, ವಿರುಪಣ್ಣ ,ದುರ್ಗೇಶ್, ಮುಂತಾದವರು ಹಾಜರಿದ್ದರು.

ವರದಿ – ಸಂಪಾದಕೀಯ

Leave a Reply

Your email address will not be published. Required fields are marked *