“ಸಂವಿಧಾನದ ಮೌಲ್ಯಗಳನ್ನು ನಾವೆಲ್ಲರೂ ಎತ್ತಿ ಹಿಡಿಯೋಣ”

Spread the love

ಸಂವಿಧಾನದ ಮೌಲ್ಯಗಳನ್ನು ನಾವೆಲ್ಲರೂ ಎತ್ತಿ ಹಿಡಿಯೋಣ

ಸಂವಿಧಾನ ದಿನಾಚರಣೆ ಅಂಗವಾಗಿ, ಇಂದು ವಿಧಾನಸೌಧದ ಕಛೇರಿಯಲ್ಲಿ ಇಲಾಖೆಯ ಅಧಿಕಾರಿಗಳೊಂದಿಗೆ ಮುಜರಾಯಿ, ಹಜ ಮತ್ತು ವಕ್ಫ್ ಇಲಾಖೆಯ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ ಯವರು ಭಾರತ ಸಂವಿಧಾನದ ಪ್ರಸ್ತಾವನೆಯನ್ನು ಓದಿದರು. ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಂದೂ ಮರೆಯದ, ಸರ್ವರಿಗೂ ಸಮಾನತೆಯನ್ನು ನೀಡಿದ ಈ ಅವಿಸ್ಮರಣೀಯ ದಿನವಾದ ಇಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರನ್ನು ಹಾಗೂ ಸಂವಿಧಾನ ರಚನಾ ಸಮಿತಿಯ ಸದಸ್ಯರನ್ನು ಸ್ಮರಿಸಿ, ಗೌರವ ಸಲ್ಲಿಸೋಣ. ದೇಶವನ್ನು ಪ್ರಜಾಪ್ರಭುತ್ವದ ಮೂಲಕ ಒಗ್ಗೂಡಿಸಿ ಆಡಳಿತಾತ್ಮಕ, ಕಾನೂನಾತ್ಮಕ ಚೌಕಟ್ಟನ್ನು ಎಲ್ಲರಿಗೂ ಸಮನಾಗಿ ನೀಡಿ ಮುನ್ನಡೆಸುತ್ತಿರುವ ನಮ್ಮ ಸಂವಿಧಾನಕ್ಕೆ ಗೌರವ ಸಲ್ಲಿಸೋಣ ಎಂದು ಹೇಳಿದರು. ಈ ಸಂದರ್ಭದಲ್ಲಿ ಮುಜರಾಯಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶ್ರೀ ತುಷಾರ್ ಗಿರಿನಾಥ್, ಆಯುಕ್ತರಾದ ಶ್ರೀಮತಿ ರೋಹಿಣಿ ಸಿಂಧೂರಿ ಮತ್ತು ಇಲಾಖೆಯ ಅಧಿಕಾರಿಗಳು ಹಾಜರಿದ್ದರು. .

ವರದಿ – ಮಹೇಶ ಶರ್ಮಾ

Leave a Reply

Your email address will not be published. Required fields are marked *