ಶಿವಮೊಗ್ಗದ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳಿಂದ ವಿಧಾನ ಪರಿಷತ್ ಕ್ಷೇತ್ರಕ್ಕೆ ನಡೆಯುತ್ತಿರುವ ಚುನಾವಣೆಯ ನಿಮಿತ್ತ ಸಭೆಯಲ್ಲಿ ಅಭ್ಯರ್ಥಿ ಶ್ರೀ ಡಿ.ಎಸ್.ಅರುಣ್ ಅವರೊಂದಿಗೆ ಭಾಗಿಯಾಗಲಾಯಿತು.

Spread the love

ಶಿವಮೊಗ್ಗದ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳಿಂದ ವಿಧಾನ ಪರಿಷತ್ ಕ್ಷೇತ್ರಕ್ಕೆ ನಡೆಯುತ್ತಿರುವ ಚುನಾವಣೆಯ ನಿಮಿತ್ತ ಸಭೆಯಲ್ಲಿ ಅಭ್ಯರ್ಥಿ ಶ್ರೀ ಡಿ.ಎಸ್.ಅರುಣ್ ಅವರೊಂದಿಗೆ ಭಾಗಿಯಾಗಲಾಯಿತು.

ಈ ಸಮಯದಲ್ಲಿ ಅಭ್ಯರ್ಥಿಯು ತನ್ನ ಮುಂದಿನ ಯೋಜನೆಗಳ ಕುರಿತು ಪ್ರತಿನಿಧಿಗಳೊಂದಿಗೆ ಸವಿಸ್ತಾರವಾಗಿ ವಿಚಾರ ವಿನಿಮಯ ಮಾಡಿಕೊಂಡು, ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ರಾಮ ಮಟ್ಟದ ಯೋಜನೆಗಳನ್ನು ಸಮರ್ಪಕವಾಗಿ ಶ್ರೀ ಸಾಮಾನ್ಯನಿಗೆ ತಲುಪಿಸಿ ಆರ್ಥಿಕ ಸಬಲರನ್ನಾಗಿಸಲು, ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳನ್ನು ಮಾದರಿಯಾಗಿ ಅಭಿವೃದ್ದಿ ಪಡಿಸಲು, ಪ್ರತಿಯೊಬ್ಬ ಸದಸ್ಯರಿಗೆ ಸರ್ಕಾರದ ಸವಲತ್ತುಗಳನ್ನು ಮುಟ್ಟಿಸುವ ಮೂಲಕ ಸಾಮಾಜಿಕ ಬದ್ಧತೆ ಕಲ್ಪಿಸಲು, ನೂತನ ವಿನೂತನ ಯೋಜನೆಗಳನ್ನು ಜಾರಿಗೆ ತರಲು, ಗ್ರಾಮ ಮಟ್ಟದಲ್ಲಿ ತಾಂತ್ರಿಕ ಮೂಲಭೂತ ಸೌಕರ್ಯದ ಮುಖಾಂತರ ಆನ್ಲೈನ್ ಸೇವೆ ಸಿಗುವಂತಾಗಲು, ಸ್ವಚ್ಛತೆ ಹಾಗೂ ಗ್ರಾಮೀಣ ಶಿಕ್ಷಣಕ್ಕೆ ಪ್ರಥಮ ಆದ್ಯತೆ ಹಾಗೂ ಮುಂತಾದ ಹಲವಾರು ಪ್ರಮುಖ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿ, ಬರುವ ಚುನಾವಣೆಯಲ್ಲಿ ಪ್ರಥಮ ಪ್ರಾಶಸ್ತ್ಯದ ಮತ ನೀಡುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕರಾದ ಶ್ರೀ ರುದ್ರೇಗೌಡ ಅವರು, ಮಂಡಲದ ಅಧ್ಯಕ್ಷರಾದ ಪ್ರಭಾಕರ್ ಅವರು ಹಾಗೂ ಹಲವಾರು ಪ್ರಮುಖ ಗಣ್ಯರು ಉಪಸ್ಥಿತರಿದ್ದರು.

ವರದಿ- ಮಹೇಶ ಶರ್ಮಾ

Leave a Reply

Your email address will not be published. Required fields are marked *