ಕೊಟ್ಟ ಮಾತಿನಂತೆ ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿ…….

Spread the love

ಕೊಟ್ಟ ಮಾತಿನಂತೆ ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿ…….

ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯ ಶಮನೇವಾಡಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ಮಂಜೂರಾದ ಸುಮಾರು 80 ಲಕ್ಷ ರೂ. ಮೊತ್ತದಲ್ಲಿ, ಚಿಕ್ಕೋಡಿ -ಇಂಚಲಕರಂಜಿ ರಸ್ತೆಯಿಂದ ಶಮನೇವಾಡಿ ಗ್ರಾಮದವರೆಗೆ 1.5 ಕಿ.ಮೀ. ರಸ್ತೆ ಅಗಲೀಕರಣ ಮತ್ತು ಸುಧಾರಣಾ ಕಾಮಗಾರಿಗಳಿಗೆ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಭೂಮಿ ಪೂಜೆ ನೆರವೇರಸಿ, ಚಾಲನೆ ನೀಡಿದರು. ಈ ಭಾಗದ ಜನರ ಮನವಿಗೆ ಸ್ಪಂದಿಸಿ ಹಾಗೂ ಪ್ರಯಾಣಿಕರ ಹಿತದೃಷ್ಟಿಯಿಂದ ರಸ್ತೆಗಳನ್ನು ಅಭಿವೃದ್ಧಿ ಮಾಡುತ್ತಿದ್ದೇವೆ. ಇದೇ ರೀತಿ ಮುಂದಿನ ದಿನಗಳಲ್ಲಿ ಕ್ಷೇತ್ರದ ಮತ್ತಷ್ಟು ರಸ್ತೆಗಳಲ್ಲಿ ಪ್ರಗತಿ ಕಾರ್ಯ ಮಾಡಿ, ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಲಾಗುವುದು ಎಂದು ಹೇಳಿದರು. ಈ ಸಂದರ್ಭದಲ್ಲಿ ಹಾಲಸಿದ್ದನಾಥ ಸಕ್ಕರೆ ಕಾರ್ಖಾನೆಯ ನಿರ್ದೇಶಕರಾದ ಶ್ರೀ ಜಯಕುಮಾರ ಖೋತ, ಶ್ರೀ ಅಣ್ಣಾಸಾಹೇಬ ಭೆಂಡವಾಡೆ, ಶ್ರೀ ಜಯಕುಮಾರ ಹೆರಗೆ, ಶ್ರೀ ಜಿತೇಂದ್ರ  ಖೋತ, ಶ್ರೀ ಪಿಂಟು ಖೋತ, ಶ್ರೀ ರವಿ ಸಾವಜಿ, ಶ್ರೀ ಭರತ ಖೋತ, ಶ್ರೀ ಅಭಿಷೇಕ ಖೋತ, ಶ್ರೀ ಮಂಜು ಕಾಂಬಳೆ, ಶ್ರೀಮತಿ ಸಂಜನಾ ಕಾಂಬಳೆ, ಶ್ರೀ ಮಹಾವೀರ ಪೂಜಾರಿ, ಶ್ರೀ ಮಾಳಪ್ಪ ಗಾವಡೆ, ಶ್ರೀ ಅಣ್ಣಾಸಾಬ ತಾರದಾಳೆ, ಪಕ್ಷದ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ವರದಿ – ಮಹೇಶ ಶರ್ಮಾ

Leave a Reply

Your email address will not be published. Required fields are marked *