ಹಿರಿಯ ಸಾಹಿತಿ ಪ್ರೊ.ಚಂದ್ರಶೇಖರ ಪಾಟೀಲ ಅವರ ನಿಧನ ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ: ಖಿದ್ಮಾ ರಾಜ್ಯಾಧ್ಯಕ್ಷ ಹಾಶಿಂ ಬನ್ನೂರು.

Spread the love

ಹಿರಿಯ ಸಾಹಿತಿ ಪ್ರೊ.ಚಂದ್ರಶೇಖರ ಪಾಟೀಲ ಅವರ ನಿಧನ ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ: ಖಿದ್ಮಾ ರಾಜ್ಯಾಧ್ಯಕ್ಷ ಹಾಶಿಂ ಬನ್ನೂರು.

“ಚಂಪಾ” ಎಂದೇ ಜನಪ್ರಸ್ಥಿರಾಗಿದ್ದ ಕನ್ನಡದ ಹಿರಿಯ ಸಾಹಿತಿ,ನಾಟಕಕಾರರು ಆದ ಪ್ರೊ: ಚಂದ್ರಶೇಖರ ಪಾಟೀಲ ಅವರ ನಿಧನ ತುಂಬಾ ನೋವು ತಂದಿದೆ. ಅವರೊಬ್ಬ  ಭಾರತೀಯ ಕವಿ, ನಾಟಕಕಾರರು ಹಾಗೂ  ಬಂಡಾಯ ಚಳವಳಿಯ ಪ್ರಮುಖ ಧ್ವನಿಗಳಲ್ಲಿ ಒಬ್ಬರಾಗಿದ್ದರು. ಹಾವೇರಿ ಜಿಲ್ಲೆಯ ಹತ್ತಿಮತ್ತೂರಿನವರಾದ ಚಂದ್ರಶೇಖರ ಪಾಟೀಲರು, ಒಬ್ಬ ಕ್ರಾಂತಿಕಾರಿ ಸಾಹಿತಿ. ಕನ್ನಡ ನಾಡು-ನುಡಿಗೆ, ಸಾಹಿತ್ಯ ಲೋಕಕ್ಕೆ ಅವರು ಸಲ್ಲಿಸಿದ ಕೊಡುಗೆ ಅಪಾರ. ಅವರ ನಿಧನದಿಂದ ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ಖಿದ್ಮಾ ಫೌಂಡೇಶನ್ ಕರ್ನಾಟಕ ರಾಜ್ಯಾಧ್ಯಕ್ಷ ಹಾಶಿಂ ಬನ್ನೂರು ಹೇಳಿದರು. ಈ ಮೂಲಕ ಅವರ ನಿಧನಕ್ಕೆ ಖಿದ್ಮಾ ಫೌಂಡೇಶನ್ ಕರ್ನಾಟಕದ ಸಂತಾಪ ಸೂಚಿಸಿದ್ದಾರೆ.

ವರದಿ – ಸಂಪಾದಕೀಯ

Leave a Reply

Your email address will not be published. Required fields are marked *