ಗಂಗಾವತಿ ನಗರಸಭೆ ವಿರುದ್ಧ ತಮ್ಮ ಆಸ್ತಿ ದಾಖಲೆಗಳನ್ನು ಒದಗಿಸಲು ಒತ್ತಾಯಿಸಿ ಶ್ರೀಮತಿ ದಾಕ್ಷಾಯಿಣಿ ಮತ್ತು ಅವರ ಕುಟುಂಬ ನಡೆಸುತ್ತಿರುವ ಹೋರಾಟದಲ್ಲಿ ಇಂದು ಆಮ್ ಆದ್ಮಿ ಪಕ್ಷ ಭಾಗವಹಿಸಿ ಬೆಂಬಲ ಸೂಚಿಸಿದರು.

Spread the love

ಗಂಗಾವತಿ ನಗರಸಭೆ ವಿರುದ್ಧ ತಮ್ಮ ಆಸ್ತಿ ದಾಖಲೆಗಳನ್ನು ಒದಗಿಸಲು ಒತ್ತಾಯಿಸಿ ಶ್ರೀಮತಿ ದಾಕ್ಷಾಯಿಣಿ ಮತ್ತು ಅವರ ಕುಟುಂಬ ನಡೆಸುತ್ತಿರುವ ಹೋರಾಟದಲ್ಲಿ ಇಂದು ಆಮ್ ಆದ್ಮಿ ಪಕ್ಷ ಭಾಗವಹಿಸಿ ಬೆಂಬಲ ಸೂಚಿಸಿದರು.

ಗಂಗಾವತಿ ನಗರಸಭೆ ವಿರುದ್ಧ ತಮ್ಮ ಆಸ್ತಿ ದಾಖಲೆಗಳನ್ನು ಒದಗಿಸಲು ಒತ್ತಾಯಿಸಿ ಶ್ರೀಮತಿ ದಾಕ್ಷಾಯಿಣಿ ಮತ್ತು ಅವರ ಕುಟುಂಬ ನಡೆಸುತ್ತಿರುವ ಹೋರಾಟದಲ್ಲಿ ಇಂದು ಆಮ್ ಆದ್ಮಿ ಪಕ್ಷ ಭಾಗವಹಿಸಿ ಅವರಿಗೆ ಬೆಂಬಲ ಸೂಚಿಸಿದ್ದು ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧ್ಯಕ್ಷ ಹುಸೇನ್ ಸಾಬ್ ಗಂಗನಾಳ ಸಾರ್ವಜನಿಕ ಆಸ್ತಿ ರಕ್ಷಣೆ ಮಾಡಬೇಕಾದ ನಗರಸಭೆ ಸಾರ್ವಜನಿಕ ಸಂಕಷ್ಟವನ್ನು ಉಂಟು ಮಾಡುವ ಕೆಲಸವನ್ನು ಮಾಡುತ್ತಿದೆ ಯಾವುದೇ ಪಾರದರ್ಶಕತೆ ಇಲ್ಲದೆ ಭ್ರಷ್ಟಾಚಾರದ ರೂಪವಾಗಿರುವ ನಗರಸಭೆ ಆಸ್ತಿಗೆ ಯಾರು ದಾಖಲೆಗಳನ್ನು ಸೃಷ್ಟಿ ಮಾಡಲು ಸಹಕರಿಸುತ್ತದೆ ಭ್ರಷ್ಟಾಚಾರದ ರೂಪವಾಗಿರುವ ನಗರಸಭೆ ಹಣ ನೀಡಿದರೆ ಆಸ್ತಿಯನ್ನು ಯಾರಿಗೆ ಬೇಕಾದರೂ ಮಾಡಿಕೊಡಲು ಸಿದ್ಧವಾಗಿದೆ ಇದರ ವಿರುದ್ಧ ನಾವು ನಿರಂತರವಾಗಿ ಹೋರಾಟ ಮಾಡುತ್ತೇವೆ ನೊಂದ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ನಾವು ಅವರೊಂದಿಗೆ ನಿಂತು ಹೋರಾಟ ಮಾಡುತ್ತೇವೆ ಎಂದರು ಈ ಸಂದರ್ಭದಲ್ಲಿ ಆಮ್ ಆದ್ಮಿ ಪಕ್ಷದ ತಾಲೂಕ ಅಧ್ಯಕ್ಷರಾದ ಜಿಲಾನಿ ಭಾಷಾ ತಾಲೂಕು ಸಮಿತಿ ಸದಸ್ಯರು ಭೋಗೇಶ್ ಆನೆಗುಂದಿ ವಾರ್ಡ್ ಅಧ್ಯಕ್ಷರಾದ ಚಂದ್ರಶೇಖರ್ ನಿಸರ್ಗ ಚಂದ್ರಶೇಖರ್ ಆಟೋ ಅಮರೇಶ್ ಕೆ ರೇಣುಕಾ ಬಸವರಾಜ್ ಭೀಮನಗೌಡ ಪರಶುರಾಮ ಒಡೆಯರ್ ದೇವರಾಜ್ ಮುಂತಾದವರು ಹೋರಾಟದಲ್ಲಿ ಭಾಗವಹಿಸಿದ್ದರು ಧರಣಿ ಸ್ಥಳಕ್ಕೆ ಇಂದು  ಜಿಲ್ಲಾಧಿಕಾರಿ ಕಾರ್ಯಾಲಯದ ಅಧಿಕಾರಿಗಳು ಭೇಟಿ ನೀಡಿ ಧರಣಿಯನ್ನು ಹಿಂಪಡೆಯುವಂತೆ ಮನವಿ ಮಾಡಿದರು ಆದರೆ ಧರಣಿನಿರತರು ನಮಗೆ ನ್ಯಾಯ ಸಿಗುವವರೆಗೂ ಧರಣಿಯನ್ನು ಹಿಂಪಡೆಯುವುದಿಲ್ಲ ಎಂದು ತಿಳಿಸಿದರು.

ವರದಿ – ಸಂಪಾದಕೀಯ

Leave a Reply

Your email address will not be published. Required fields are marked *