ಕರ್ತವ್ಯ ನಿರತ ಪೊಲೀಸ್ ಅಪಘಾತದಲ್ಲಿ ಸಾವು, ತಿಂಗಳ ಹಿಂದಷ್ಟೇ ಮುದ್ದು ಮಗುವಿಗೆ ತಂದೆಯಾಗಿದ್ದ ಪ್ರಸಾದ್..

Spread the love

ಕರ್ತವ್ಯ ನಿರತ ಪೊಲೀಸ್ ಅಪಘಾತದಲ್ಲಿ ಸಾವು, ತಿಂಗಳ ಹಿಂದಷ್ಟೇ ಮುದ್ದು ಮಗುವಿಗೆ ತಂದೆಯಾಗಿದ್ದ ಪ್ರಸಾದ್..

ಚಾಮರಾಜನಗರ: ಪೊಲೀಸ್ ಇಲಾಖೆಯಲ್ಲಿ ಪೇದೆಯಾಗಿ ಕೆಲಸ ಮಾಡಿಕೊಂಡು,  ಪಿಎಸ್ ಐ ಆಗಬೇಕೆಂಬ ಗುರಿಯಿಂದ ನಿರಂತರ ಅಭ್ಯಾಸ ಮಾಡಿಕೊಂಡು, ಈ ಸಾಧನೆಗೆ ಸಾಥ್ ಕೊಡುವ ಮಡದಿ ಹಾಗೂ ಒಂದು ತಿಂಗಳ ಹಿಂದಷ್ಟೇ ಹುಟ್ಟಿದ ಗಂಡು ಮಗುವಿನೊಂದಿಗೆ ಸುಖಿ ಜೀವನ ನಡೆಸುತ್ತಿದ್ದವನ ಬಾಳಿನಲ್ಲಿ ವಿಧಿ ಬೇರೆಯೇ ಆಟವಾಡಿದೆ. ಸಂತೇಮರಹಳ್ಳಿ ಪೊಲೀಸ್ ಠಾಣೆಯ ಕಾನ್ಸ್ ಸ್ಟೇಬಲ್, ತಾಲೂಕಿನ ಇರಸವಾಡಿ ನಿವಾಸಿ ಪ್ರಸಾದ್(34) ಸೋಮವಾರ ರಾತ್ರಿ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಕರ್ತವ್ಯ ನಿಮಿತ್ತ ಕೆಂಪನಪುರಕ್ಕೆ‌ ಪ್ರಸಾದ್ ಮತ್ತು ಎಎಸ್ ಐ ರಾಜು ಬೈಕ್ ನಲ್ಲಿ ಹೋಗಿದ್ದರು. ಈ ವೇಳೆ ಕಾರು ಡಿಕ್ಕಿ ಹೊಡೆದಿದೆ. ಪ್ರಸಾದ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇವರು ಕೆಲ ವರ್ಷಗಳ ಹಿಂದೆ ನಾಗವಳ್ಳಿ ಗ್ರಾಮದ ಯುವತಿಯನ್ನು ವಿವಾಹವಾಗಿದ್ದರು. ಮಗು ಜನಿಸಿ ಒಂದು ತಿಂಗಳಾಗಿತ್ತು. ಪ್ರಸಾದ್ ಜೊತೆ ಬೈಕ್ ನಲ್ಲಿ ಹಿಂದೆ ಕುಳಿತಿದ್ದ ಎಎಸ್ಐ ರಾಜು ಸ್ಥಿತಿ ಗಂಭೀರವಾಗಿದ್ದು, ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಕಾರಿನ ಮಾಲೀಕನಿಗೂ ಸಣ್ಣಪುಟ್ಟ ಗಾಯಗಳಾಗಿರುವುದಾಗಿ ತಿಳಿದುಬಂದಿದೆ. ಸಂತೇಮರಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವರದಿ – ಹರೀಶ ಶೇಟ್ಟಿ ಬೆಂಗಳೂರು

Leave a Reply

Your email address will not be published. Required fields are marked *